ಬ್ರೇಕಿಂಗ್ ನ್ಯೂಸ್
18-09-23 02:41 pm Mangalore Correspondent ಕರಾವಳಿ
ಮಂಗಳೂರು, ಸೆ.18: ದೇವಸ್ಥಾನ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ಆಟೋ ರಿಕ್ಷಾ ಇಳಿಜಾರು ಹಾದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ-ಬಂಗ್ಲೆಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಫಲಿಗ (25) ಮೃತಪಟ್ಟ ಯುವತಿ. ಅಪಘಾತದಲ್ಲಿ ಯುವತಿ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಇವರಲ್ಲಿ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಯುವತಿಯ ಕುಟುಂಬಸ್ಥರು ಅರ್ಕುಳದಿಂದ ಆಟೋದಲ್ಲಿ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು ಆನಂತರ ಅದ್ಯಪಾಡಿ ದೇವಸ್ಥಾನಕ್ಕೆ ಬಂದಿದ್ದರು. ಹಿಂತಿರುಗಿ ಹೋಗಲು ಗೂಗಲ್ ಮ್ಯಾಪಲ್ಲಿ ಗುರುಪುರ - ಬಂಗ್ಲೆಗುಡ್ಡೆ ರಸ್ತೆಯನ್ನು ಹತ್ತಿರ ಇದೆಯೆಂದು ತೋರಿಸಿತ್ತು. ಇದರಿಂದಾಗಿ ಆಟೋವನ್ನು ಕಿರಿದಾದ ರಸ್ತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಆಟೋ ರಭಸದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಜಪೆ ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Auto crashes against electricity pole Young woman dead, five others injured at Gurupura.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm