ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.
ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
12-03-25 03:51 pm
HK News Desk
Mangalore Chakravarti Sulibele, Prakash Raj:...
11-03-25 06:19 pm
ರಾಜ್ಯದ ಕಿರು ಫೈನಾನ್ಸ್ ಸಂಸ್ಥೆಗಳಲ್ಲಿ 40 ಸಾವಿರ ಕೋ...
11-03-25 03:41 pm
Ranya Rao gold smuggling case: ರನ್ಯಾ ರಾವ್ ಚಿನ...
11-03-25 02:27 pm
Ranya Rao Latest News: ವಿಧಾನಸಭೆಯಲ್ಲಿ ರನ್ಯಾ ಪ್...
10-03-25 09:51 pm
12-03-25 11:41 am
HK News Desk
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
Cricket Win India, Trophy 2025: ರೋಚಕ ಹಣಾಹಣಿಯಲ...
09-03-25 10:49 pm
Dubai, Kerala, Death Sentence: ದುಬೈನಲ್ಲಿ ಇಬ್ಬ...
08-03-25 04:03 pm
12-03-25 11:10 pm
Mangalore Correspondent
Diganth Missing case, Reunite with family: 17...
12-03-25 10:16 pm
Mangalore, SDPI, Diganth: ಸೌಹಾರ್ದ ಕೆಡಿಸಲು ಯತ್...
12-03-25 09:54 pm
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಶ...
12-03-25 09:17 pm
Mangalore Rain, Heat, weather: ಸುಳ್ಯ, ಕಡಬದಲ್ಲ...
12-03-25 06:25 pm
11-03-25 07:34 pm
Bangalore Correspondent
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm
Koppal Rape, Crime, Arrest: ಪೆಟ್ರೋಲ್ ದುಡ್ಡು ಕ...
08-03-25 10:44 pm