ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm