ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
25-02-26 01:48 pm
supritha Jain
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm