ಬ್ರೇಕಿಂಗ್ ನ್ಯೂಸ್
19-09-23 01:26 pm Udupi Correspondent ಕರಾವಳಿ
ಉಡುಪಿ, ಸೆ.19: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬ್ರಹ್ಮಾವರ ತಾಲೂಕು ಕೋಡಿಕನ್ಯಾಣ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ ಸುಮಾರು 5 ಲಕ್ಷ ರೂ. ಪಡೆದು ಹಣವನ್ನು ಮರಳಿಸದೆ ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.
ತಾನು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ತಿಳಿಸಿ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದೀನ ಅವರಿಂದ 2018ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿದ್ದಾಳೆ.
ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು.
ಅನಂತರದ ದಿನಗಳಲ್ಲಿ ಆಕೆ ಚುನಾವಣ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ ದಿನಗಳನ್ನು ಮುಂದೂಡುತ್ತ ಬರುತ್ತಿದ್ದು, ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದೀನ ಅವರು ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ತಾನು ನೀಡಿದ ಹಣವನ್ನು ಸಂಪೂರ್ಣ ವಾಪಸು ನೀಡುವಂತೆ ಕೇಳಿಕೊಂಡಿದ್ದರು. ಆಗ ಚೈತ್ರಾ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಳು. ಅಲ್ಲದೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
Chaitra Kundapura fraud case, another case filed at Kota police station, Chaitra cheats man of 5 lakhs.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm