ಬ್ರೇಕಿಂಗ್ ನ್ಯೂಸ್
19-09-23 01:26 pm Udupi Correspondent ಕರಾವಳಿ
ಉಡುಪಿ, ಸೆ.19: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬ್ರಹ್ಮಾವರ ತಾಲೂಕು ಕೋಡಿಕನ್ಯಾಣ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ ಸುಮಾರು 5 ಲಕ್ಷ ರೂ. ಪಡೆದು ಹಣವನ್ನು ಮರಳಿಸದೆ ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.
ತಾನು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ತಿಳಿಸಿ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದೀನ ಅವರಿಂದ 2018ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿದ್ದಾಳೆ.
ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು.
ಅನಂತರದ ದಿನಗಳಲ್ಲಿ ಆಕೆ ಚುನಾವಣ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ ದಿನಗಳನ್ನು ಮುಂದೂಡುತ್ತ ಬರುತ್ತಿದ್ದು, ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದೀನ ಅವರು ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ತಾನು ನೀಡಿದ ಹಣವನ್ನು ಸಂಪೂರ್ಣ ವಾಪಸು ನೀಡುವಂತೆ ಕೇಳಿಕೊಂಡಿದ್ದರು. ಆಗ ಚೈತ್ರಾ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಳು. ಅಲ್ಲದೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
Chaitra Kundapura fraud case, another case filed at Kota police station, Chaitra cheats man of 5 lakhs.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm