ಬ್ರೇಕಿಂಗ್ ನ್ಯೂಸ್
19-09-23 01:26 pm Udupi Correspondent ಕರಾವಳಿ
ಉಡುಪಿ, ಸೆ.19: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬ್ರಹ್ಮಾವರ ತಾಲೂಕು ಕೋಡಿಕನ್ಯಾಣ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ ಸುಮಾರು 5 ಲಕ್ಷ ರೂ. ಪಡೆದು ಹಣವನ್ನು ಮರಳಿಸದೆ ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.
ತಾನು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ತಿಳಿಸಿ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದೀನ ಅವರಿಂದ 2018ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿದ್ದಾಳೆ.
ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು.
ಅನಂತರದ ದಿನಗಳಲ್ಲಿ ಆಕೆ ಚುನಾವಣ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ ದಿನಗಳನ್ನು ಮುಂದೂಡುತ್ತ ಬರುತ್ತಿದ್ದು, ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದೀನ ಅವರು ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ತಾನು ನೀಡಿದ ಹಣವನ್ನು ಸಂಪೂರ್ಣ ವಾಪಸು ನೀಡುವಂತೆ ಕೇಳಿಕೊಂಡಿದ್ದರು. ಆಗ ಚೈತ್ರಾ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಳು. ಅಲ್ಲದೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
Chaitra Kundapura fraud case, another case filed at Kota police station, Chaitra cheats man of 5 lakhs.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm