ಬ್ರೇಕಿಂಗ್ ನ್ಯೂಸ್
19-09-23 08:15 pm Mangalore Correspondent ಕರಾವಳಿ
ಉಳ್ಳಾಲ, ಸೆ.19: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವಕ್ಕೆ ವಿರೋಧ, ವಿಘ್ನಗಳು ಎದುರಾದರೂ ಇಂದು ಅದೇ ಸಭಾಂಗಣದಲ್ಲೇ ಉಪ ಕುಲಪತಿಗಳ ಸಮಕ್ಷಮದಲ್ಲಿ ವಿಘ್ನ ವಿನಾಶಕನ ವಿಗ್ರಹ ಪ್ರತಿಷ್ಠಾಪಿಸಿ ಉತ್ಸವ ಆಚರಿಸಲಾಯಿತು.
ಮುಂಜಾನೆಯೇ ಪರಿಸರ ಸ್ನೇಹಿ ಬಣ್ಣ ಲೇಪನವಿಲ್ಲದ ಸಣ್ಣ ಗಾತ್ರದ ಮಣ್ಣಿನ ಗಣೇಶನ ವಿಗ್ರಹವನ್ನು ಮಂಗಳಾ ಸಭಾಂಗಣದ ವೇದಿಕೆಯಲ್ಲಿ ಪ್ರತಿಷ್ಠಾಪಿಸಲಾಗಿತ್ತು. ವಿ.ವಿ ಸಭಾಂಗಣದಲ್ಲಿ ಗಣೇಶೋತ್ಸವ ಆಚರಣೆಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿ.ವಿ. ಕ್ಯಾಂಪಸ್ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ವಿವಿ ಉಪ ಕುಲಪತಿ ಜಯರಾಜ್ ಅಮೀನ್ ಅವರೇ ಖುದ್ದು ಪುರೋಹಿತರ ಜತೆ ವೈದಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.


ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ವಿ.ವಿ ಆಡಳಿತದ ಸೂಚನೆಯಂತೆ ಶಾಲನ್ನ ತೆಗೆದು ಗಣೇಶೋತ್ಸವದಲ್ಲಿ ಪಾಲ್ಗೊಂಡರು.
ವಿ.ವಿ.ಯಲ್ಲಿ ಗಣೇಶೋತ್ಸವ ಮಾಡಿಯೇ ಸಿದ್ಧ ಎಂದು ಚಾಲೆಂಜ್ ಮಾಡಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಸುರತ್ಕಲ್ ಶಾಸಕ ಡಾ.ಭರತ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉತ್ಸವದಲ್ಲಿ ಪಾಲ್ಗೊಂಡಿದ್ದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಕಲ್ಲಡ್ಕ ಪ್ರಭಾಕರ ಭಟ್ ಗಣೇಶೋತ್ಸವವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಗಣಪತಿಯ ಮೇಲೆ ನಂಬಿಕೆ ಇಟ್ಟವರು ಅಂತಹ ಕೆಲಸ ಮಾಡಲ್ಲ. ಯಾವುದೇ ಸರಕಾರವಾಗಲಿ ಇಂತಹ ದೃಷ್ಟಿಕೋನ ಇಟ್ಟುಕೊಂಡಿರಬೇಕು. ವಿ.ವಿಯಲ್ಲಿ ನಡೆದ ಗೊಂದಲವನ್ನು ಉಪಕುಲಪತಿಗಳು ಬಗೆಹರಿಸಿ ಗಣೇಶೋತ್ಸವವನ್ನ ಸಾಂಗವಾಗಿ ನಡೆಸಿದ್ದು ಶ್ಲಾಘನೀಯ. ಹಿಂದೂ ರಾಷ್ಟ್ರವಾಸಿಗಳು ಇಲ್ಲಿನ ಧರ್ಮ, ಸಂಸ್ಕೃತಿಯ ಮೂಲ ಆಚರಣೆ, ಆರಾಧನೆಗಳಿಗೆ ತೊಂದರೆಯಾಗದಂತೆ ಬಾಳಬೇಕಿದೆ. ಹಿಂದೂಗಳು ಅನ್ಯ ಧರ್ಮೀಯರ ಉತ್ಸವಗಳಿಗೆ ಕಲ್ಲೆಸೆದ ನಿದರ್ಶನಗಳೇ ಇಲ್ಲ. ಸಾಮರಸ್ಯ, ಸಮನ್ವಯದಿಂದ ಬದುಕುವುದೇ ಹಿಂದೂಗಳ ಆಶಯ ಎಂದರು.
ಮಂಗಳೂರು ವಿ.ವಿ. ಕುಲಸಚಿವ ಕೆ.ರಾಜು ಮಾತನಾಡಿ ಕ್ಯಾಂಪಸ್ಸಿನಲ್ಲಿ ಗಣೇಶೋತ್ಸವ ನಡೆಸುವ ಕುರಿತು ಗೊಂದಲಗಳು ಉಂಟಾದಾಗ ಸರಕಾರದ ಗಮನಕ್ಕೆ ತರಲಾಗಿತ್ತು. ಸರಕಾರದ ಆದೇಶದಂತೆ ಸರಳವಾಗಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಹಣ ಹೊಂದಿಸಿ ಸಿಬ್ಬಂದಿ ವರ್ಗ ಸೇರಿಕೊಂಡು ಗಣೇಶೋತ್ಸವ ಆಚರಿಸಿದ್ದೇವೆ ಎಂದರು.
Mangalore University Ganeshotsava celebrated in campus amid opposition with Kalladka Prabhakar Bhat. Ganeshotsava was celebrated in Mangala Auditorium of the Mangaluru University on Tuesday in the presence of vice-chancellor by keeping a small colourless idol of Ganesha despite opposition amidst police security.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm