ಬ್ರೇಕಿಂಗ್ ನ್ಯೂಸ್
20-09-23 02:13 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮೂವರು ಡಿಸಿಎಂ ಮಾಡಿದ್ರೆ ತಪ್ಪೇನಿಲ್ಲ, ಆದರೆ ಅದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇದನ್ನ ಬಹಿರಂಗವಾಗಿ ಚರ್ಚೆ ಮಾಡುವ ಅಗತ್ಯ ಇಲ್ಲ. ಈ ಬಗ್ಗೆ ಸಿ.ಟಿ.ರವಿ ಸಲಹೆ ಬೇಕಿಲ್ಲ. ಅವರು ಸೋತು ಸುಣ್ಣ ಆಗಿದ್ದಾರೆ, ಸುಮ್ಮನಿದ್ದರೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಸಿಟಿ ರವಿ ಅವರನ್ನು ವಿಧಾನಸಭೆಯಿಂದಲೂ ಜನ ಮನೆಗೆ ಕಳಿಸಿದ್ರು, ದೆಹಲಿಯಿಂದಲೂ ಪಕ್ಷದವರೇ ವಾಪಸ್ ಕಳಿಸಿದ್ದಾರೆ. ಕಾಂಗ್ರೆಸ್ ಬಗ್ಗೆ ಅನವಶ್ಯಕವಾಗಿ ಬಾಯಿ ತೆಗೆಯೋದು ಸರಿಯಲ್ಲ. ಅವರಿಗೆ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಗಿಲ್ಲ. ಅವರಿಗೆ ಸುದ್ದಿಯಲ್ಲಿ ಇರಬೇಕು ಅನ್ನೋದು ಹವ್ಯಾಸ ಆಗಿದೆ. ಹಾಗೆ ಏನೇನೋ ಹೇಳುತ್ತಿದ್ದಾರೆ ಎಂದರು.

ಚುನಾವಣಾ ಪೂರ್ವದಲ್ಲಿಯೂ ನಮ್ಮಲ್ಲಿ ಒಗ್ಗಟ್ಟಿಲ್ಲ ಅಂತ ಹೇಳಿದ್ದರು. ಆದರೆ ನಾವು ಒಗ್ಗಟ್ಟಾಗಿ ಕೆಲಸ ಮಾಡಿ ಕೊನೆಗೆ ಏನಾಯ್ತು ಅಂತ ಗೊತ್ತಿದೆ. ಈಗಲೂ ಒಗ್ಗಟ್ಟಲ್ಲಿ ಇದ್ದೇವೆ, ರಾಜಕೀಯ ತೀರ್ಮಾನ ವರಿಷ್ಠರು ಮಾಡ್ತಾರೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ಸರಿಯಾಗಿ ಇದ್ದೇವೆ ಎಂದರು.
ಕಾವೇರಿ ವಿಚಾರದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಿದೆ. ವಸ್ತುಸ್ಥಿತಿ ಅಧ್ಯಯನ ಮಾಡಿ ರಿಯಾಲಿಟಿ ಮೇಲೆ ಮುಂದುವರಿಯಬೇಕಿದೆ. ಈ ಸಲ ಮಳೆ ಕೂಡ ಕಡಿಮೆಯಾಗಿದ್ದು ನಮ್ಮಲ್ಲೇ ನೀರು ಇಲ್ಲದಾಗಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ರಾಜಕೀಯವಾಗಿಯೂ ಎಲ್ಲರೂ ಒಗ್ಗಟ್ಟಾಗಿ ಚರ್ಚಿಸಬೇಕಾಗಿದೆ. ನಮ್ಮ ರಾಜ್ಯದ ಸಂಸದರು ದೆಹಲಿಯಲ್ಲಿ ಮಾತನಾಡಬೇಕಿದೆ. ಈಗಾಗಲೇ ಸಿಎಂ ಪ್ರಧಾನಿ ಮೋದಿಯವರ ಸಮಯ ಕೇಳಿದ್ದಾರೆ. ಕೋರ್ಟ್ ಗಳು ಆದೇಶ ಕೊಡ್ತದೆ, ಆದರೆ ಕೆಲವು ವಿಚಾರಗಳಲ್ಲಿ ನಾವು ಜನರ ಪರ ನಿಲ್ಲಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಕುರಿತ ಪ್ರಶ್ನೆಗೆ, ಹುಕ್ಕಾ ಬಾರ್ ಗಳಿಂದ ಸಾರ್ವಜನಿಕರಿಗೆ ಅನಾರೋಗ್ಯ ಆಗ್ತಿದೆ. ಹೀಗಾಗಿ ನಮ್ಮ ಕಾಯಿದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ. ಹುಕ್ಕಾ ಬಾರ್ ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗಿದೆ. ಅದರಲ್ಲಿ ಬೇರೆ ಮಿಶ್ರಣ ಮಾಡಿ ಹಾಕುವಂಥದ್ದು ಇದೆ. ಇಂಥದ್ದನ್ನ ನಿಯಂತ್ರಣ ಮಾಡೋದು ಬಹಳ ಕಷ್ಟ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಇಂತಹದ್ದು ಇರಬಾರದು. ಬಾರ್, ರೆಸ್ಟೋರೆಂಟ್ ಪರಿಸರದಲ್ಲಿ ಇವೆಲ್ಲ ಇರದಂತೆ ನೋಡಿಕೊಳ್ಳಬೇಕಾಗಿದೆ ಎಂದರು.
Dinesh Gundu Rao slams CT Ravi says better he shuts up as he is even thrown from Delhi by BJP party.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm