ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm