ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm