ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm