ಬ್ರೇಕಿಂಗ್ ನ್ಯೂಸ್
22-09-23 06:02 pm Mangalore Correspondent ಕರಾವಳಿ
ಉಳ್ಳಾಲ, ಸೆ.22: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ.
ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.
ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ.
ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Kotekar health care hospital negligence, DHO alerts in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm