ಬ್ರೇಕಿಂಗ್ ನ್ಯೂಸ್
22-09-23 09:10 pm Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ನಳಿನ್ ಕುಮಾರ್ ಶುಕ್ರವಾರ ತುರ್ತಾಗಿ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾಗಿ ಸಂಸದರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಬೆಂಗಳೂರು- ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಕೇಳಿಕೊಂಡಿರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ರೈಲ್ವೇ ಸಚಿವರನ್ನು ಇದೇ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಒತ್ತಾಯಿಸಿದ್ದಾರೆ, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದಲ್ಲದೆ, ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯದಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಪುತ್ತೂರು - ಸುಬ್ರಹ್ಮಣ್ಯ ರಸ್ತೆಯಲ್ಲಿ ಪ್ಯಾಸೆಂಜರ್ ರೈಲು ಒದಗಿಸಬೇಕೆಂಬ ಮನವಿಗೂ ಸಚಿವರು ಒಪ್ಪಿಗೆ ನೀಡಿದ್ದಾರಂತೆ.
ಅಲ್ಲದೆ, ರೈಲ್ವೇ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಲ್ಲಿರುವ ಮಂಗಳೂರು ರೈಲು ನಿಲ್ದಾಣವನ್ನು ನೈರುತ್ಯ ರೈಲ್ವೇಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಸಂಸದರ ಮನವಿಗೆ ರೈಲ್ವೇ ಸಚಿವರು ಈಗಾಗಲೇ ಈ ಕುರಿತು ಅಗತ್ಯ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ರೈಲ್ವೇ ಹಾಗೂ ಕೊಂಕಣ ರೈಲ್ವೆಗಳ ವಿಭಾಗಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬವನ್ನು ತಪ್ಪಿಸಲು ಸಂಸದರು ಸಚಿವರ ಗಮನ ಸೆಳೆದಿದ್ದಾರೆ. ಈ ಕುರಿತು ಅನಗತ್ಯ ವಿಳಂಬವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ ಎಂದು ಸಂಸದರ ಕಚೇರಿಯ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಒಂಬತ್ತು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಕಟಿಸಲಾಗಿದ್ದು ಅದರಲ್ಲಿ ಕೇರಳದ ಕಾಸರಗೋಡಿನಿಂದ ತಿರುವನಂತಪುರಕ್ಕೆ ಮತ್ತೊಂದು ರೈಲು ನೀಡಿರುವುದು ಮಂಗಳೂರಿನ ವಂದೇ ಭಾರತ್ ರೈಲು ಬೇಡಿಕೆಗೆ ದೊಡ್ಡ ಹಿನ್ನಡೆಯಾಗಿತ್ತು. ಜನರ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಮತ್ತೆ ರೈಲ್ವೇ ಸಚಿವರನ್ನು ಭೇಟಿಯಾಗಿ ಮತ್ತೊಮ್ಮೆ ಮನವಿ ಸಲ್ಲಿಸಿದ್ದಾರೆ.
October end Vande Bharat to be introduced from Mangalore to Goa, MP Nalin Kateel meets Railway Minister.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm