ಬ್ರೇಕಿಂಗ್ ನ್ಯೂಸ್
23-09-23 02:22 pm Mangalore Correspondent ಕರಾವಳಿ
ಮಂಗಳೂರು, ಸೆ.23: ಎತ್ತಿನಹೊಳೆ ಯೋಜನೆ ಮುಗಿದ ಅಧ್ಯಾಯ, ಹಳೆ ವಿಚಾರವನ್ನು ಪ್ರಶ್ನೆ ಕೇಳಬೇಡಿ ಎಂದು ಮಾಜಿ ಸಚಿವ ವೀರಪ್ಪ ಮೊಯ್ಲಿ ಪತ್ರಕರ್ತರ ಪ್ರಶ್ನೆಗೆ ಸಿಡುಕಿನ ಉತ್ತರ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮೊಯ್ಲಿ ಅವರಲ್ಲಿ ಎತ್ತಿನಹೊಳೆ ಯೋಜನೆಯನ್ನು ನೀವು ತರಾತುರಿಯಲ್ಲಿ ಆರಂಭಿಸಿದ್ದಿರಿ, ಈಗ ಅದರಿಂದಾಗಿ ಕರಾವಳಿಗೇ ಬರ ಬಂದಿದೆ, ಈಗಲಾದರೂ ನೀವು ನಿಲ್ಲಿಸಲು ಹೇಳುತ್ತೀರಾ ಎಂಬ ಪ್ರಶ್ನೆಗೆ, ಅದೆಲ್ಲ ಹಳೆ ವಿಚಾರ, ಪ್ರತಿ ಬಾರಿ ಆ ಕುರಿತು ಪ್ರಶ್ನೆ ಮಾಡಬೇಡಿ ಎಂದಿದ್ದಾರೆ.


ಯೋಜನೆ ಜಾರಿಗೆ ನೀವು ಮತ್ತು ಸದಾನಂದ ಗೌಡ ಕಾರಣಕರ್ತರು, ಯಾಕೆ ಪ್ರಶ್ನೆ ಮಾಡಬಾರದು, ಅದಕ್ಕೆ 23 ಸಾವಿರ ಕೋಟಿ ದುಡ್ಡು ಖರ್ಚು ಮಾಡಿದ್ದೀರಲ್ಲಾ ಎಂದು ಕೇಳಿದ್ದಕ್ಕೆ, ಬಿಜೆಪಿಯವರು ಯೋಜನೆ ನಿಲ್ಲಿಸಿದ್ದಾರೆಯೇ.. ನಾವು ಯಾಕೆ ನಿಲ್ಲಿಸಬೇಕು. ಇದಕ್ಕೆಲ್ಲ ಉತ್ತರ ನೀಡಲ್ಲ ಎಂದರು. ನೀವು ಕರಾವಳಿ ಜನರಿಗೆ ಉತ್ತರ ಕೊಡಲೇಬೇಕು ಎಂದಾಗ, ನಾನು ಎಲ್ಲಿ ಉತ್ತರ ಕೊಡಬೇಕೋ ಅಲ್ಲಿಯೇ ಕೊಡುತ್ತೇನೆ ಎಂದು ಮೌನಕ್ಕೆ ಜಾರಿದರು. ನೀವು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೀರಂತೆ, ಅಲ್ಲಿನ ಜನರಿಗೂ ಉತ್ತರ ಕೊಡಬೇಕಾಗುತ್ತದೆ ಎಂದಾಗ, ಅದು ಆ ಪ್ರಶ್ನೆ ಬಂದಾಗ ಉತ್ತರ ಕೊಡುತ್ತೇನೆ ಎಂದು ನಕ್ಕರು.
ಎತ್ತಿನಹೊಳೆ ಯೋಜನೆಯಿಂದ ಒಂದು ಹನಿ ನೀರೂ ಕಳಿಸೋಕೆ ಆಗಿಲ್ಲ, 20 ಸಾವಿರ ಖರ್ಚು ಮಾಡಿದ್ದೀರಿ ಎಂದಾಗ, ನೀವೇ ಒಂದೆಡೆ ನೀರು ಹರಿಸಿಲ್ಲ ಅಂತೀರಿ. ಇಲ್ಲಿ ನೀರಿಲ್ಲ, ಬರಡಾಗಿದೆ ಅಂತೀರಿ. ನೀರೇ ಹರಿಸಿಲ್ಲಾಂದ್ರೆ, ನೀರು ಖಾಲಿಯಾಗೋದು ಹೇಗಾಗುತ್ತೆ. ಈಗ ಯೋಜನೆ ಕಾಮಗಾರಿ ಆಗುತ್ತಾ ಇದೆ. ನಿಮ್ಮಲ್ಲೇ ಪ್ರಶ್ನೆ, ಉತ್ತರ ಎರಡೂ ಇದೆ ಎಂದರು ಮೊಯ್ಲಿ. ನೀವು ಯೋಜನೆ ವೈಫಲ್ಯದ ಬಗ್ಗೆ ಉತ್ತರ ಕೊಡಬೇಕು ಎಂದು ಮತ್ತೆ ಕೇಳಿದ್ದಕ್ಕೆ, ನಾನು ಉತ್ತರ ಕೊಡುತ್ತೇನೆ, ನಿಮಗೆ ಕೊಡಬೇಕಿಲ್ಲ ಎಂದು ಸಿಡುಕು ತೋರಿದರು. ಪದೇ ಪದೇ ಆ ಕುರಿತು ಪ್ರಶ್ನೆ ಕೇಳಿದ್ದರಿಂದ ಸಿಡಿಮಿಡಿಗೊಂಡ ಮೊಯ್ಲಿ, ನಾನು ಬೇಕಾದಲ್ಲಿ ಉತ್ತರ ಕೊಡುತ್ತೇನೆ ಎನ್ನುತ್ತಲೇ ಮುಖ ತಿರುಗಿಸಿ ಕುಳಿತುಬಿಟ್ಟರು.
2013ರಲ್ಲಿ ಆಗ ಚಿಕ್ಕಬಳ್ಳಾಪುರ ಸಂಸದರಾಗಿದ್ದ ವೀರಪ್ಪ ಮೊಯ್ಲಿ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲೇ ಶಿಲಾನ್ಯಾಸ ಮಾಡಿದ್ದರು. ಕರಾವಳಿ ಜನರ ಭಾರೀ ವಿರೋಧ ಮಧ್ಯೆಯೇ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದರು. ಈವರೆಗೆ ಯೋಜನೆಗೆ 23 ಸಾವಿರ ಕೋಟಿ ಖರ್ಚಾಗಿದೆ ಎಂದು ಸರಕಾರ ಲೆಕ್ಕ ಹೇಳುತ್ತಿದ್ದು, ಒಂದು ಹನಿ ನೀರನ್ನೂ ಒಯ್ಯಲು ಸಾಧ್ಯವಾಗಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ಜನರ ದುಡ್ಡನ್ನು ಬೇಕಾಬಿಟ್ಟಿ ಖರ್ಚು ಮಾಡಿ, ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಜನರೇ ಮಾಡುತ್ತಿದ್ದಾರೆ.
Yetthinahole project is a finished story, Journalists in Managlore slam Veerappa Moily.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm