ಬ್ರೇಕಿಂಗ್ ನ್ಯೂಸ್
23-09-23 04:07 pm Mangalore Correspondent ಕರಾವಳಿ
ಮಂಗಳೂರು, ಸೆ.23: ಜೆಡಿಎಸ್ ಅನ್ನೋದು ಉಡ ಇದ್ದಂತೆ. ಅದು ಯಾವುದೇ ಪಕ್ಷ ಸೇರಿಕೊಂಡರೂ ಅನಿಷ್ಟ ಒಳ ಹೊಕ್ಕಂತೆ. ಆ ಅನಿಷ್ಟದಿಂದ ನಾವು ಸಾಕಷ್ಟು ಅನುಭವಿಸಿದ್ದೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಒಟ್ಟು ಸೇರಿ ಅವರಿಗೊಂದು, ನಮಗೊಂದು ಸ್ಥಾನ ಸಿಕ್ಕಿತ್ತು. ನಾವೆಲ್ಲ ಖರ್ಗೆ ಸಹಿತ ಸೋತಿದ್ದೆವು. ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ಹೀಗೆಂದು ವಿಶ್ಲೇಷಣೆ ಮಾಡಿದ್ದು ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ಸಂದರ್ಭ ಕೇಳಿದ ಪ್ರಶ್ನೆಗೆ, ಈಗ ಬಿಜೆಪಿಗೆ ಅನಿಷ್ಟ ಹೊಕ್ಕಿದೆ ಎಂದರು. ಅಲ್ಲದೆ, ಹಿಂದೆ ಬಿಜೆಪಿ ಜೊತೆ ಸೇರುವ ದಾರಿದ್ರ್ಯ ಬಂದಿಲ್ಲ ಎನ್ನುತ್ತಿದ್ದರು. ಈಗ ಅದೇ ದಾರಿದ್ರ್ಯ ಬಿಜೆಪಿ ಒಳ ಹೊಕ್ಕಂತೆ ಆಗಿದೆ ಎಂದು ವ್ಯಂಗ್ಯವಾಡಿದರು. ಮೂರು ಡಿಸಿಎಂ ಆಗಬೇಕೆಂಬ ಪ್ರಶ್ನೆಗೆ, ಅದು ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ ಅಷ್ಟೇ. ನಮ್ಮ ಪಕ್ಷ ಬಲಿಷ್ಟವಾಗಿದೆ. ಕೆಲವರು ಗಟ್ಟಿ ಮಾಡಿಕೊಳ್ಳಲು ಈ ರೀತಿ ಸಲಹೆ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿದೆ. ಸದ್ಯಕ್ಕೆ ಮೂರು ಡಿಸಿಎಂ ಮಾಡುವ ಚರ್ಚೆ ಇಲ್ಲ ಎಂದಿದ್ದಾರೆ.
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿರುವ ಪ್ರಶ್ನೆಗೆ, ನಾನು ಮುಖ್ಯಮಂತ್ರಿಯಾಗಿದ್ದಾಗ ಖಡಕ್ಕಾಗಿ ನಿಂತಿದ್ದೆ. ನಮ್ಮದೇ ಜೊತೆಗಿದ್ದ ಜಯಲಲಿತಾ ಮರೀನ್ ಬೀಚ್ ನಲ್ಲಿ ಉಪವಾಸ ಕುಳಿತರೂ, ನೀರಿನ ವಿಚಾರದಲ್ಲಿ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ನಮ್ಮ ಸರಕಾರ ಕೋರ್ಟ್ ಮೂಲಕ ವಿವಾದ ಬಗೆಹರಿಸಲು ಯತ್ನಿಸುತ್ತಿದೆ. ಬಿಜೆಪಿಯವರು ವಿರೋಧ ಪಕ್ಷದಲ್ಲಿರುವುದರಿಂದ ವಿರೋಧಿಸುತ್ತಿದ್ದಾರೆ ಎಂದರು. ಪ್ರತಿ ಬಾರಿ ಕಾವೇರಿ ವಿಚಾರದಲ್ಲಿ ಕರ್ನಾಟಕ ಯಾಕೆ ಸೋಲುತ್ತಿದೆ ಎಂಬ ಪ್ರಶ್ನೆಗೆ, ರಾಜ್ಯ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ. ಆದರೆ ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗಿಸಲು ಎಡವಿದ್ದೇವೆ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗಿದೆ. ನಾವಿದ್ದಾಗ ಯಗಡಿ ಅಣೆಕಟ್ಟು ಮಾಡಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ವಿರೋಧದಿಂದಾಗಿ ಮಾಡಲು ಸಾಧ್ಯವಾಗಲಿಲ್ಲ. ಈಗಲೂ ಮಳೆ ಬಂದರೆ, ಎಲ್ಲ ಹೋರಾಟ ನಿಲ್ತದೆ ಎಂದು ಹೇಳಿದರು.
ಕೇಂದ್ರ ಸರಕಾರ ಮಹಿಳಾ ಮಸೂದೆ ಸಂಸತ್ತಿನಲ್ಲಿ ಮಂಡಿಸಿ ಐತಿಹಾಸಿಕ ಅನ್ನುವ ರೀತಿ ಪೋಸು ಕೊಡುತ್ತಿದೆ. ಅದೇ ಬಿಲ್ಲನ್ನು ನಾವು 2011ರಲ್ಲಿ ರಾಜ್ಯಸಭೆಯಲ್ಲಿ ಮಂಡಿಸಿ ಪಾಸ್ ಮಾಡಿದ್ದೆವು. ನಮ್ಮ ಜೊತೆಗಿದ್ದ ಪಕ್ಷಗಳು ವಿರೋಧಿಸಿದ್ದರಿಂದ ಲೋಕಸಭೆಯಲ್ಲಿ ಪಾಸ್ ಮಾಡಲು ಆಗಿರಲಿಲ್ಲ. ಆದರೆ ಇವರು ಬಂದು 10 ವರ್ಷಗಳಾಗಿದ್ದು, ಬಹುಮತದ ಸರ್ಕಾರಕ್ಕೆ ಮಹಿಳಾ ಮಸೂದೆ ತರಲು ಇಷ್ಟು ಸಮಯ ಬೇಕಾಗಿತ್ತೇ.. ಮಹಿಳಾ ಮಸೂದೆ ಅನ್ನುವುದು ಚುನಾವಣೆ ಸಂದರ್ಭದಲ್ಲಿ ಬರೀ ಮೊಸಳೆ ಕಣ್ಣೀರು ಅಷ್ಟೇ ಎಂದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಶಶಿಧರ ಹೆಗ್ಡೆ, ಐವಾನ್ ಡಿಸೋಜ, ಕೃಪಾ ಅಮರ್ ಆಳ್ವ ಮತ್ತಿತರರಿದ್ದರು.
The JD(S) is like a uda. Whichever party it joins, it is like an evil creep in. We have suffered a lot from that evil. In the last Lok Sabha elections, they got one seat and we got one. We all lost, including Kharge. Former minister and senior Congress leader Veerappa Moily has analysed the BJP-JD(S) alliance.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm