ಬ್ರೇಕಿಂಗ್ ನ್ಯೂಸ್
24-09-23 05:45 pm Mangalore Correspondent ಕರಾವಳಿ
ಮಂಗಳೂರು, ಸೆ.24: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನನಗೆ ದಕ್ಷಿಣ ಕನ್ನಡ ಕ್ಷೇತ್ರದ ಉಸ್ತುವಾರಿ ಕೊಟ್ಟಿದ್ದಾರೆ. 15 ದಿನಗಳಲ್ಲಿ ಯಾರು ಅಭ್ಯರ್ಥಿ ಆಗಬೇಕೆಂದು ಇಲ್ಲಿನ ಪ್ರಮುಖರಿಂದ ಮಾಹಿತಿ ಸಂಗ್ರಹಿಸುತ್ತೇನೆ. ಈ ಬಾರಿ ದಕ್ಷಿಣ ಕನ್ನಡ ಕ್ಷೇತ್ರವನ್ನು ನಾವು ಗೆಲ್ಲಲೇಬೇಕು. 2004ಕ್ಕೂ ಮೊದಲಿದ್ದ ರೀತಿಯಲ್ಲಿ ನಾವೇ ಈ ಕ್ಷೇತ್ರವನ್ನು ಗೆಲ್ಲುವಂತೆ ಈಗಲೇ ಕೆಲಸ ಆರಂಭಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರು ಯಾವ ರೀತಿ ಮತ ನೀಡುತ್ತಾರೆ ಅನ್ನೋದನ್ನು ಊಹಿಸಲು ಆಗಲ್ಲ. ಹಿಂದಿನ ಬಾರಿ ನಾನು ಕೂಡ ಒಂದಷ್ಟು ಮತಗಳ ಅಂತರದಿಂದ ಸೋತಿದ್ದೆ. ಆದರೆ ಈ ಬಾರಿ 44 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದೇನೆ. ಹಾಗಾಗಿ ಜನರು ಚಿಂತಿಸಿ, ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸುತ್ತಾರೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಐದು ಭರವಸೆಗಳನ್ನು ಈಡೇರಿಸಿದ್ದು, ಜನರ ಮನಸ್ಸು ಗೆದ್ದಿದೆ. ಬೆಲೆಯೇರಿಕೆಯಿಂದ ತತ್ತರಿಸಿರುವ ಜನರ ಕೈಗೆ ಹಣ ನೀಡಿದ್ದೇವೆ. ಮಂಗಳೂರಿನ ಜನರ ಮನಸ್ಸು ಗೆಲ್ಲುವುದು ಕಷ್ಟವಾಗಲ್ಲ ಎಂದರು.
ಬಿಜೆಪಿ ಅಭಿವೃದ್ಧಿಯ ಕಾರಣಕ್ಕೆ ಗೆದ್ದಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಮೇಲೆ ಬಿಜೆಪಿ ಗೆದ್ದಿಲ್ಲ. ಇವರು ಕೇವಲ ಭಾವನಾತ್ಮಕ ವಿಚಾರಗಳ ಮೇಲಷ್ಟೆ ಗೆದ್ದಿದ್ದಾರೆ. ನಾವು ನಮ್ಮ ಕೆಲಸ ಹೇಳಿಕೊಂಡು ಮತ ಕೇಳುತ್ತೇವೆ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನವನ್ನೂ ಕೇಳುತ್ತೇವೆ. ಈಗ ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ನಲ್ಲಿ ಕೆಲವರಿಗೆ ನೋವಾಗಿದೆ, ಅವರು ಪಕ್ಷದ ಜೊತೆಗಿನ ಸೆಕ್ಯುಲರ್ ಎಸ್ ಅನ್ನು ತೆಗೆದು ಹಾಕಬೇಕು. ಹಿಂದೆ ಬಿಜೆಪಿಯನ್ನು ಕೋಮುವಾದಿ ಅಂತಿದ್ರು. ಈಗ ಅವರೇ ಜೊತೆ ಸೇರಿಕೊಂಡಿದ್ದಾರೆ. ತಾವು ನಂಬಿದ ತತ್ವ ಸಿದ್ಧಾಂತಕ್ಕೆ ಧಕ್ಕೆಯಾದಾಗ ಆ ಪಕ್ಷದ ನಾಯಕರು ನಿರ್ಧಾರ ತಗೋತಿದ್ದಾರೆ. ಇದರ ಪರಿಣಾಮ ಸದ್ಯದಲ್ಲೇ ಗೊತ್ತಾಗಲಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಎಂಎಲ್ಸಿ ಹರೀಶ್ ಕುಮಾರ್, ಐವಾನ್ ಡಿಸೋಜ, ಬಿ. ಇಬ್ರಾಹಿಂ, ಶಶಿಧರ್ ಹೆಗ್ಡೆ, ಜೆಆರ್ ಲೋಬೊ, ಪದ್ಮರಾಜ್ ಆರ್, ಶುಭೋದಯ ಆಳ್ವಾ ಮತ್ತಿತರರಿದ್ದರು.
Dakshina Kannada Lok sabha winning is for sure says Madhu Bangarappa in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm