ಬ್ರೇಕಿಂಗ್ ನ್ಯೂಸ್
24-09-23 11:27 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ, ಗೋಸೇವಾ ಗತಿವಿಧಿ ಕರ್ನಾಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗೋರಥಯಾತ್ರೆಗೆ ಪುದು ಗ್ರಾಮದ ಬ್ರಹ್ಮಗಿರಿ, ಗೋವಿನ ತೋಟದಲ್ಲಿ ಚಾಲನೆ ನೀಡಲಾಯಿತು. ಗೋಶಾಲೆಯ ಭಕ್ತಿಭೂಷಣದಾಸ್ ಪ್ರಭೂಜಿಯವರ ಮಾರ್ಗದರ್ಶನದಲ್ಲಿ ದೇಸಿ ಗೋತಳಿಯ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ.
ಭಾನುವಾರ ಬೆಳಗ್ಗೆ ಗೋವಿಗೆ ಮತ್ತು ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಲಾಯಿತು. ವೃಂದಾವನದ ರಮೇಶ್ ಗೋಸ್ವಾಮಿ ಉಪಸ್ಥಿತಿಯಲ್ಲಿ ಗೋಪೂಜೆ ಮತ್ತು ಗೋಕಥೆಯನ್ನು ಪಾರಾಯಣ ಮಾಡಲಾಯಿತು. ನ.14ರಿಂದ 22ರ ವರೆಗೆ ನಡೆಯಲಿರುವ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವದ ಪ್ರಚಾರಾರ್ಥ ಗೋರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಯಲ್ಲಿ ರಥ ಸಂಚರಿಸಲಿದೆ. ರಥಕ್ಕೆ ವಿಶೇಷ ಪೂಜೆಗೈದು ಚಾಲನೆ ನೀಡಿದ್ದು, ಈ ವೇಳೆ ಯಜ್ಞ ಸಮಿತಿಯ ಅಧ್ಯಕ್ಷ ಬೃಜೇಶ್ ಚೌಟ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



ಸೆ.25ರಂದು ಬೆಳಗ್ಗೆ 7ಕ್ಕೆ ಗೋರಥವು ಮೂಡುಬಿದಿರೆಗೆ ತಲುಪಲಿದ್ದು, ಅಲ್ಲಿನ ವೆಂಕಟರಮಣ ದೇವಸ್ಥಾನ ವಠಾರದಲ್ಲಿ ಗೋಪೂಜೆ ಮತ್ತು ಗೋಕಥೆ ಪಾರಾಯಣ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆನಂತರ ಮೂಡುಬಿದ್ರೆ ತಾಲೂಕಿನ ವಿವಿಧ ಶಾಲೆ, ಕಾಲೇಜುಗಳಿಗೆ ತೆರಳಲಿದೆ. ಚಲಿಸುವ ಕಾಮಧೇನು ಆಗಿರುವ ದೇಸಿ ಗಿಡ್ಡ ತಳಿ ಗೋವನ್ನು ರಥದಲ್ಲಿರಿಸಿ ಅದರ ಮಹತ್ವವನ್ನು ಸಾರುವ ಉದ್ದೇಶ ರಥಯಾತ್ರೆಯದ್ದಾಗಿದೆ. ಸೆ.24ರಂದಿ ನ.8ರ ವರೆಗೆ ಗೋರಥಯಾತ್ರೆಯು ಮೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ.
The 'Goratha Yatra' organised jointly by Radhasurabhi Gomandir, Rashtriya Goseva Sansthan and Goseva Gatividhi Karnataka was flagged off at Brahmagiri in Pudu village. Under the guidance of Bhaktibhushandas Prabhuji of Gaushala, the Rath Yatra is being organised to create awareness about desi cow breed.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm