ಬ್ರೇಕಿಂಗ್ ನ್ಯೂಸ್
24-09-23 11:27 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ, ಗೋಸೇವಾ ಗತಿವಿಧಿ ಕರ್ನಾಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗೋರಥಯಾತ್ರೆಗೆ ಪುದು ಗ್ರಾಮದ ಬ್ರಹ್ಮಗಿರಿ, ಗೋವಿನ ತೋಟದಲ್ಲಿ ಚಾಲನೆ ನೀಡಲಾಯಿತು. ಗೋಶಾಲೆಯ ಭಕ್ತಿಭೂಷಣದಾಸ್ ಪ್ರಭೂಜಿಯವರ ಮಾರ್ಗದರ್ಶನದಲ್ಲಿ ದೇಸಿ ಗೋತಳಿಯ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ.
ಭಾನುವಾರ ಬೆಳಗ್ಗೆ ಗೋವಿಗೆ ಮತ್ತು ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಲಾಯಿತು. ವೃಂದಾವನದ ರಮೇಶ್ ಗೋಸ್ವಾಮಿ ಉಪಸ್ಥಿತಿಯಲ್ಲಿ ಗೋಪೂಜೆ ಮತ್ತು ಗೋಕಥೆಯನ್ನು ಪಾರಾಯಣ ಮಾಡಲಾಯಿತು. ನ.14ರಿಂದ 22ರ ವರೆಗೆ ನಡೆಯಲಿರುವ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವದ ಪ್ರಚಾರಾರ್ಥ ಗೋರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಯಲ್ಲಿ ರಥ ಸಂಚರಿಸಲಿದೆ. ರಥಕ್ಕೆ ವಿಶೇಷ ಪೂಜೆಗೈದು ಚಾಲನೆ ನೀಡಿದ್ದು, ಈ ವೇಳೆ ಯಜ್ಞ ಸಮಿತಿಯ ಅಧ್ಯಕ್ಷ ಬೃಜೇಶ್ ಚೌಟ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಸೆ.25ರಂದು ಬೆಳಗ್ಗೆ 7ಕ್ಕೆ ಗೋರಥವು ಮೂಡುಬಿದಿರೆಗೆ ತಲುಪಲಿದ್ದು, ಅಲ್ಲಿನ ವೆಂಕಟರಮಣ ದೇವಸ್ಥಾನ ವಠಾರದಲ್ಲಿ ಗೋಪೂಜೆ ಮತ್ತು ಗೋಕಥೆ ಪಾರಾಯಣ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆನಂತರ ಮೂಡುಬಿದ್ರೆ ತಾಲೂಕಿನ ವಿವಿಧ ಶಾಲೆ, ಕಾಲೇಜುಗಳಿಗೆ ತೆರಳಲಿದೆ. ಚಲಿಸುವ ಕಾಮಧೇನು ಆಗಿರುವ ದೇಸಿ ಗಿಡ್ಡ ತಳಿ ಗೋವನ್ನು ರಥದಲ್ಲಿರಿಸಿ ಅದರ ಮಹತ್ವವನ್ನು ಸಾರುವ ಉದ್ದೇಶ ರಥಯಾತ್ರೆಯದ್ದಾಗಿದೆ. ಸೆ.24ರಂದಿ ನ.8ರ ವರೆಗೆ ಗೋರಥಯಾತ್ರೆಯು ಮೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ.
The 'Goratha Yatra' organised jointly by Radhasurabhi Gomandir, Rashtriya Goseva Sansthan and Goseva Gatividhi Karnataka was flagged off at Brahmagiri in Pudu village. Under the guidance of Bhaktibhushandas Prabhuji of Gaushala, the Rath Yatra is being organised to create awareness about desi cow breed.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm