ಬ್ರೇಕಿಂಗ್ ನ್ಯೂಸ್
25-09-23 05:22 pm Mangalore Correspondent ಕರಾವಳಿ
ಉಳ್ಳಾಲ, ಸೆ.25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ರೈಲ್ವೇ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದ್ದು, ಛಿದ್ರಗೊಂಡ ಮೃತದೇಹ ರೈಲಿನಡಿಯಲ್ಲಿ ಸಿಲುಕಿದ ಹಿನ್ನೆಲೆಯಲ್ಲಿ ರೈಲನ್ನು ನಿಲ್ಲಿಸಿ ಹೊರ ತೆಗೆಯಲಾಗಿದೆ.
ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆಗೈದ ಯುವಕ. ಆದಿತ್ಯವಾರ ಸಂಜೆ ಮನೆಯಿಂದ ಹೊರಟ ಪ್ರಶಾಂತ್ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರಲ್ಲಿ ಬಂದ ಪ್ರಶಾಂತ್ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ಹಳಿಯಲ್ಲಿ ನಡೆದುಕೊಂಡು ಹೋಗಿ ರೈಲಿನಡಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆ. ಅವಿವಾಹಿತರಾಗಿದ್ದ ಪ್ರಶಾಂತ್ ಪಾನಮತ್ತರಾಗಿ ಕೃತ್ಯವನ್ನು ಎಸಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ಐ ಮಧುಚಂದ್ರ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.

ತುರ್ತು ನಿಲುಗಡೆಯಾದ ರೈಲು!
ಆದಿತ್ಯವಾರ ರಾತ್ರಿ 8.15 ರ ಸುಮಾರಿಗೆ ಘಟನೆ ನಡೆದಿದೆ. ಪೋರ್ ಬಂದರ್ - ಕೊಚ್ಚುವೆಲಿ ನಡುವೆ ಸಂಚರಿಸುವ ರೈಲಿನಡಿಗೆ ಬಿದ್ದು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಸೋಮೇಶ್ವರ, ಉಚ್ಚಿಲ ಗೇಟ್ ದಾಟುತ್ತಿದ್ದಂತೆ ಬೋಗಿಯಡಿ ಶಬ್ದ ಕೇಳಿಬಂದಿದ್ದು, ದುರ್ವಾಸನೆ ಇರುವುದನ್ನು ಗಮನಿಸಿದ ಉಚ್ಚಿಲ ಸ್ಟೇಷನ್ ಮಾಸ್ಟರ್, ತಕ್ಷಣ ರೈಲಿನ ಲೋಕೊ ಪೈಲೆಟ್ ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಉಚ್ಚಿಲ ಗೇಟ್ ನಿಂದ 2 ಕಿಮೀ ದೂರ ಚಲಿಸಿದ್ದ ರೈಲಿನಡಿ ಛಿದ್ರಗೊಂಡ ಮೃತದೇಹ ಸಿಲುಕಿಕೊಂಡಿತ್ತು. ತಕ್ಷಣ ಲೋಕೊಪೈಲಟ್ ರೈಲನ್ನ ತುರ್ತಾಗಿ ನಿಲ್ಲಿಸಿದ್ದಾರೆ. ಬೋಗಿಗಳಡಿ ಛಿದ್ರವಾಗಿ ಚಕ್ರಗಳಿಗೆ ಸಿಲುಕಿದ್ದ ಮೃತದೇಹದ ಮಾಂಸ ಖಂಡಗಳನ್ನ ಕ್ಷಿಪ್ರವಾಗಿ ತೆರವುಗೊಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿ ರೈಲು ಸುಗಮ ಸಂಚಾರಕ್ಕೆ ರೈಲ್ವೇ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
44 year old commits suicide by falling to speeding train at Ullal in Mangalore, train stopped to remove body pieces. The deceased has been identified as Prashanth from Konchady.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm