ಬ್ರೇಕಿಂಗ್ ನ್ಯೂಸ್
25-09-23 05:22 pm Mangalore Correspondent ಕರಾವಳಿ
ಉಳ್ಳಾಲ, ಸೆ.25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ರೈಲ್ವೇ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದ್ದು, ಛಿದ್ರಗೊಂಡ ಮೃತದೇಹ ರೈಲಿನಡಿಯಲ್ಲಿ ಸಿಲುಕಿದ ಹಿನ್ನೆಲೆಯಲ್ಲಿ ರೈಲನ್ನು ನಿಲ್ಲಿಸಿ ಹೊರ ತೆಗೆಯಲಾಗಿದೆ.
ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆಗೈದ ಯುವಕ. ಆದಿತ್ಯವಾರ ಸಂಜೆ ಮನೆಯಿಂದ ಹೊರಟ ಪ್ರಶಾಂತ್ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರಲ್ಲಿ ಬಂದ ಪ್ರಶಾಂತ್ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ಹಳಿಯಲ್ಲಿ ನಡೆದುಕೊಂಡು ಹೋಗಿ ರೈಲಿನಡಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆ. ಅವಿವಾಹಿತರಾಗಿದ್ದ ಪ್ರಶಾಂತ್ ಪಾನಮತ್ತರಾಗಿ ಕೃತ್ಯವನ್ನು ಎಸಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ಐ ಮಧುಚಂದ್ರ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.
ತುರ್ತು ನಿಲುಗಡೆಯಾದ ರೈಲು!
ಆದಿತ್ಯವಾರ ರಾತ್ರಿ 8.15 ರ ಸುಮಾರಿಗೆ ಘಟನೆ ನಡೆದಿದೆ. ಪೋರ್ ಬಂದರ್ - ಕೊಚ್ಚುವೆಲಿ ನಡುವೆ ಸಂಚರಿಸುವ ರೈಲಿನಡಿಗೆ ಬಿದ್ದು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಸೋಮೇಶ್ವರ, ಉಚ್ಚಿಲ ಗೇಟ್ ದಾಟುತ್ತಿದ್ದಂತೆ ಬೋಗಿಯಡಿ ಶಬ್ದ ಕೇಳಿಬಂದಿದ್ದು, ದುರ್ವಾಸನೆ ಇರುವುದನ್ನು ಗಮನಿಸಿದ ಉಚ್ಚಿಲ ಸ್ಟೇಷನ್ ಮಾಸ್ಟರ್, ತಕ್ಷಣ ರೈಲಿನ ಲೋಕೊ ಪೈಲೆಟ್ ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಉಚ್ಚಿಲ ಗೇಟ್ ನಿಂದ 2 ಕಿಮೀ ದೂರ ಚಲಿಸಿದ್ದ ರೈಲಿನಡಿ ಛಿದ್ರಗೊಂಡ ಮೃತದೇಹ ಸಿಲುಕಿಕೊಂಡಿತ್ತು. ತಕ್ಷಣ ಲೋಕೊಪೈಲಟ್ ರೈಲನ್ನ ತುರ್ತಾಗಿ ನಿಲ್ಲಿಸಿದ್ದಾರೆ. ಬೋಗಿಗಳಡಿ ಛಿದ್ರವಾಗಿ ಚಕ್ರಗಳಿಗೆ ಸಿಲುಕಿದ್ದ ಮೃತದೇಹದ ಮಾಂಸ ಖಂಡಗಳನ್ನ ಕ್ಷಿಪ್ರವಾಗಿ ತೆರವುಗೊಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿ ರೈಲು ಸುಗಮ ಸಂಚಾರಕ್ಕೆ ರೈಲ್ವೇ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
44 year old commits suicide by falling to speeding train at Ullal in Mangalore, train stopped to remove body pieces. The deceased has been identified as Prashanth from Konchady.
09-07-25 01:53 pm
Bangalore Correspondent
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ; ಮೊದಲು...
08-07-25 08:35 pm
Karnataka Ban Online Betting and Gambling: ಆನ...
08-07-25 05:01 pm
Exorcism Ritual in Shivamogga, Death; ದೆವ್ವ ಬ...
08-07-25 02:47 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
08-07-25 09:33 pm
Mangalore Correspondent
“Mission Possible: KMC Attavar Performs Life-...
08-07-25 03:37 pm
KMC Hospital Mangalore, Attavar, Surgery: ಅಪಘ...
08-07-25 03:27 pm
Mangalore suicide, Thumbe: ಮೊಬೈಲ್ ಗೀಳು ; ತುಂಬ...
08-07-25 10:15 am
ಎಂಟು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ ; ಪ್ರೀತಿಸುತ...
07-07-25 05:02 pm
08-07-25 10:01 pm
Bengaluru Staffer
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm