ಬ್ರೇಕಿಂಗ್ ನ್ಯೂಸ್
25-09-23 06:17 pm Mangalore Correspondent ಕರಾವಳಿ
ಮಂಗಳೂರು, ಸೆ.25: ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಮುಸ್ಲಿಮ್ ವ್ಯಾಪಾರಸ್ಥರೇ ಪ್ರಭಾವಿಗಳಿದ್ದಾರೆ. ಹಿಂದಿನಿಂದಲೂ ಹಿಂದು- ಮುಸ್ಲಿಮರು ಒಗ್ಗಟ್ಟಿನಿಂದಲೇ ವಹಿವಾಟು ಮಾಡಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ಮಾತ್ರ ಈದ್ ಮಿಲಾದ್ ಹೆಸರಲ್ಲಿ ಕಡ್ಡಾಯ ರಜೆಯ ಬ್ಯಾನರ್ ಹಾಕಿರುವುದು ವಿವಾದಕ್ಕೆ ಗುರಿಯಾಗಿದೆ.
ಆಳಸಮುದ್ರ ಮೀನುಗಾರಿಕೆ ಬಳಿಕ ದಕ್ಕೆಗೆ ಬರುವ ಬೋಟ್ ಗಳಿಂದ ಮೀನುಗಳನ್ನು ಇಳಿಸಿದಲ್ಲಿ ಅವನ್ನು ಖರೀದಿಸುವುದು ವ್ಯಾಪಾರಿಗಳು. ಇವರು ಏಲಂ ಮಾಡಿ ಮೀನುಗಳನ್ನು ಅಗಾಧ ಪ್ರಮಾಣದಲ್ಲಿ ಖರೀದಿಸಿ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಮತ್ತು ಹೊರ ಪ್ರದೇಶಗಳಿಗೆ ಪೂರೈಕೆ ಮಾಡುತ್ತಾರೆ. ಇಂತಹ ದೊಡ್ಡ ವ್ಯಾಪಾರಿಗಳಲ್ಲಿ ಮುಸ್ಲಿಮರದ್ದೇ ಪ್ರಾಬಲ್ಯ. ಸದ್ಯ ಇಂತಹ 25 ವ್ಯಾಪಾರಿಗಳಿದ್ದು, ಈ ಪೈಕಿ ಇಬ್ಬರಷ್ಟೇ ಹಿಂದುಗಳಿದ್ದಾರಂತೆ. ಇತ್ತೀಚಿನ ವರ್ಷಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ಪ್ರಭಾವ ಹೆಚ್ಚಿದ್ದರಿಂದ ದಕ್ಕೆಯಲ್ಲಿ ಅವರದೇ ಕಾರುಬಾರು ಎನ್ನುತ್ತಾರೆ, ಬೋಟ್ ಮಾಲೀಕರು.

ಹಾಗೆಂದು, ದಕ್ಕೆಯಲ್ಲಿ ಮತದ ಹೆಸರಲ್ಲಿ ಭೇದ ಇರಲಿಲ್ಲ. ಹಿಂದು, ಮುಸ್ಲಿಮರ ಹಬ್ಬಗಳ ದಿನದಂದು ಸ್ವಯಂಪ್ರೇರಿತ ರಜೆ ಘೋಷಿಸಿಕೊಂಡು ಸೌಹಾರ್ದ ವಾತಾವರಣ ಇದೆ. ಈ ಬಾರಿ ಸೆ.28ರ ಈದ್ ಮಿಲಾದ್ ದಿನದ ಹೆಸರಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಹಿಂದುಗಳನ್ನೇ ಟಾರ್ಗೆಟ್ ಮಾಡಿದ್ದಾಗಿ ಹಿಂದು ಸಂಘಟನೆಗಳು ಆಕ್ರೋಶ ಎಬ್ಬಿಸಿವೆ. ಇದಕ್ಕೆ ಕಾರಣವಾಗಿರುವುದು ಬ್ಯಾನರಿನಲ್ಲಿ ಹಾಕಿದ್ದ ಅಂಶಗಳು. ಸೆ.28ರ ಈದ್ ದಿನದಂದು ಬೆಳಗ್ಗೆ 3.45ರಿಂದಲೇ ರಜೆ ಇದ್ದು, ಯಾರು ಕೂಡ ಮೀನು ವ್ಯಾಪಾರ ಮಾಡಬಾರದು. ದಕ್ಕೆಯಲ್ಲಿ ವ್ಯಾಪಾರ ಮಾಡಿದರೆ, ಅಂಥವರನ್ನು ಒಂದು ತಿಂಗಳ ಕಾಲ ಬಹಿಷ್ಕರಿಸಲಾಗುವುದು. ಅಲ್ಲದೆ, ದಂಡನೆ ವಿಧಿಸಲಾಗುವುದು ಎಂದು ಬ್ಯಾನರ್ ಹಾಕಲಾಗಿದೆ.
ಈ ಬಗ್ಗೆ ಅಲ್ಲಿನ ವ್ಯಾಪಾರಿಗಳಲ್ಲಿ ಮಾಹಿತಿ ಕೇಳಿದಾಗ, ನಮ್ಮಲ್ಲಿ ಭೇದ ಇಲ್ಲ. ಹಿಂದಿನಿಂದಲೂ ಹಿಂದು – ಮುಸ್ಲಿಮರ ತಲಾ ನಾಲ್ಕು ಹಬ್ಬಗಳಿಗೆ ರಜೆ ಇದೆ. ಕ್ರಿಸ್ಮಸ್ ಸೇರಿ ಕ್ರೈಸ್ತರ ಮೂರು ಹಬ್ಬಗಳ ದಿನದಂದೂ ರಜೆ ಇದೆ. ಇವೆಲ್ಲ ಅಲಿಖಿತ ನಿಮಯದಂತೆ ನಡೆದುಕೊಂಡು ಬಂದಿದೆ. ರಜೆ ಇದ್ದ ದಿವಸ ಬೋಟಿನಿಂದ ಮೀನು ಇಳಿಸುವುದಾಗಲೀ, ದಕ್ಕೆಯಲ್ಲಿ ಮೀನು ವ್ಯಾಪಾರ ಆಗಲೀ ಇರುವುದಿಲ್ಲ. ಮೊನ್ನೆ ಗಣೇಶೋತ್ಸವ ದಿನ ರಜೆ ಇದ್ದರೂ, ನಸುಕಿನ 3 ಗಂಟೆ ವೇಳೆಗೆ ಒಂದಿಬ್ಬರು ಪರ್ಸೀನ್ ಬೋಟಿನಿಂದ ಮೀನು ಖರೀದಿಸಿ, ಮಾರಾಟ ಮಾಡಿದ್ದಾರೆ. ಇದು ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದರಿಂದ ಬ್ಯಾನರ್ ಹಾಕಲಾಗಿದೆ. ರಜೆಯಂದ್ರೆ 6 ಗಂಟೆಯಿಂದ 6 ಗಂಟೆ ವರೆಗೆ ಅಲ್ಲ. ಬೆಳಗ್ಗೆ 3.45ಕ್ಕೇ ಶುರುವಾಗುತ್ತದೆ ಎಂಬುದನ್ನು ತಿಳಿಸಲು ಬ್ಯಾನರ್ ಹಾಕಿದ್ದೇವೆ ಎಂದಿದ್ದಾರೆ.
ಆದರೆ ಈ ರೀತಿ ಹಿಂದೆ ಯಾವತ್ತೂ ಬ್ಯಾನರ್ ಹಾಕಿದ್ದಿಲ್ಲ. ಮುಸ್ಲಿಂ ಡಾಮಿನೇಟ್ ಇರುವ ವ್ಯಾಪಾರಸ್ಥರ ಸಂಘವು ಮುಸ್ಲಿಮರ ಹಬ್ಬಕ್ಕೆ ಕಡ್ಡಾಯ ರಜೆಯ ಬ್ಯಾನರ್ ಹಾಕಿರುವುದು ಹಿಂದುಗಳ ಕಣ್ಣಲ್ಲಿ ತಮ್ಮನ್ನು ಗುರಿ ಮಾಡಲಾಗಿದೆ ಎನ್ನುವಂತೆ ಕಂಡಿದೆ. ಅಲ್ಲದೆ, ಕಾನೂನು ಉಲ್ಲಂಘಿಸಿ ವ್ಯಾಪಾರ ಮಾಡಿದರೆ, ಅಂಥವರನ್ನು ಬಹಿಷ್ಕರಿಸುವುದು ಸೇರಿದಂತೆ ದಂಡನೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದು ಹಿಂದು ಸಂಘಟನೆಗಳನ್ನು ಕೆರಳಿಸಿದೆ. ಹಿಂದು ವ್ಯಾಪಾರಸ್ಥರಿಗೆ ಬಹಿಷ್ಕಾರ ಹಾಕೋದಕ್ಕೆ ಇಲ್ಲೇನು ಷರೀಯತ್ ಕಾನೂನು ಇದೆಯಾ ಎಂದು ಹಿಂದು ಮುಖಂಡರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ದಕ್ಕೆಯ ಹಿಂದು ವ್ಯಾಪಾರಸ್ಥರಲ್ಲಿ ಕೇಳಿದರೆ, ಮುಸ್ಲಿಮರು ಮುಸ್ಲಿಮರಿಗಾಗಿಯೇ ಅದನ್ನು ಹಾಕಿರೋದು, ತಮಗಲ್ಲ. ಅವರದೇ ವ್ಯಾಪಾರಸ್ಥರು ಹೆಚ್ಚಿರೋದು. ನಾವು ಒಂದಿಬ್ಬರಿದ್ದು ಬ್ಯಾನರ್ ನಮ್ಮನ್ನು ಟಾರ್ಗೆಟ್ ಮಾಡಿಲ್ಲ ಅಂತಿದ್ದಾರೆ.
Eid Milad 2023 banner row in Mangalore, Holiday is only for Muslim traders not for Hindus.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm