ಬ್ರೇಕಿಂಗ್ ನ್ಯೂಸ್
26-09-23 02:24 pm Mangalore Correspondent ಕರಾವಳಿ
ಮಂಗಳೂರು, ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.
ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
One arrested by Mangalore Kankandy Town Police for misbehaving inappropriately with Indiana Hospital Customer staff. The arrested has been identified as Ashik.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
14-02-26 04:38 pm
Mangaluru Staffer
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm