ಬ್ರೇಕಿಂಗ್ ನ್ಯೂಸ್
26-09-23 02:24 pm Mangalore Correspondent ಕರಾವಳಿ
ಮಂಗಳೂರು, ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.
ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
One arrested by Mangalore Kankandy Town Police for misbehaving inappropriately with Indiana Hospital Customer staff. The arrested has been identified as Ashik.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm