ಬ್ರೇಕಿಂಗ್ ನ್ಯೂಸ್
27-09-23 12:31 pm Mangalore Correspondent ಕರಾವಳಿ
ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ.
ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.




ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ.
Tempo driver commits suicide by jumping to well at Olapete at Thokottu in Mangalore. The Deceased has been identified as Nagesh (62).
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm