ಬ್ರೇಕಿಂಗ್ ನ್ಯೂಸ್
27-09-23 12:57 pm Mangalore Correspondent ಕರಾವಳಿ
ಮಂಗಳೂರು, ಸೆ.27: ಬಸ್ ನಿಲ್ಲಿಸಿಲ್ಲ ಎಂದು ಕಂಡಕ್ಟರ್ ಮೇಲೆ ಯುವಕರ ತಂಡ ಹಲ್ಲೆಗೈದಿದ್ದಾರೆಂದು ಆರೋಪಿಸಿ ಅಡ್ಯಾರ್- ಕಣ್ಣೂರಿನಲ್ಲಿ ಬಸ್ ಚಾಲಕರು, ಮಾಲಕರು ಖಾಸಗಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಸಂಜೆ ಹಲ್ಲೆ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಆ ರೂಟಿನಲ್ಲಿ ಬಸ್ ಗಳನ್ನು ತಡೆದು ಸಿಬಂದಿಯೇ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಎರಡೂ ಕಡೆಯವರು ದೂರು ನೀಡಿದ್ದಾರೆ. ಅಡ್ಯಾರ್ ಕಣ್ಣೂರು ನಿವಾಸಿ ಅಬ್ದುಲ್ ಖಾದರ್ ಎಂಬವರು ಸಂಜೆ ವೇಳೆಗೆ ಎಸ್.ಕೆ. ಟ್ರಾವೆಲ್ಸ್ ಎಂಬ ಖಾಸಗಿ ಬಸ್ಸಿನಲ್ಲಿ ಬಂದಿದ್ದರು. ಕಣ್ಣೂರು ಸ್ಟಾಪ್ ನಲ್ಲಿ ಇಳಿಯಲಿದೆ, ಬಸ್ ನಿಲ್ಲಿಸುವಂತೆ ಹೇಳಿದರೂ, ಬಸ್ ಸಿಬಂದಿ ಮುಂದಕ್ಕೆ ಒಯ್ದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತಿಗೆ ಮಾತು ಬೆಳೆದಿದ್ದು ಬಸ್ ನಿರ್ವಾಹಕನೇ ತನ್ನ ಮೇಲೆ ಹಲ್ಲೆಗೈದಿದ್ದಾನೆಂದು ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಬಸ್ ನಿರ್ವಾಹಕ ಯಶವಂತ್ ಮೇಲೆ ಅಬ್ದುಲ್ ಖಾದರ್ ಮತ್ತು ಅವರ ಸಹವರ್ತಿ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ ಎನ್ನುವ ದೂರು ಸಿಬಂದಿ ಕಡೆಯದ್ದು.


ಬಸ್ ನಿರ್ವಾಹಕ ಯಶವಂತ್ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಖಂಡಿಸಿ ಖಾಸಗಿ ಬಸ್ಸಿನ ಸಿಬಂದಿ ಸೇರಿ ಇಂದು ಅಡ್ಯಾರ್ ನಲ್ಲಿ ಪ್ರತಿಭಟನೆ ನಡೆಸಿದ್ದು, ಬಸ್ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಡ್ಯಾರ್, ಕಣ್ಣೂರಿನಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ನಡೆಸದಂತೆ ಸಿಬಂದಿಯನ್ನು ಚದುರಿಸಿದ್ದಾರೆ. ಟೈಮಿಂಗ್ ಕಾರಣಕ್ಕೆ ಬಸ್ ನಿಲ್ಲಿಸಲು ಆಗಿರಲಿಲ್ಲ. ಅದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಿಬಂದಿ ಹೇಳುತ್ತಿದ್ದಾರೆ. ಹೀಗಾಗಿ ಖಾಸಗಿ ಬಸ್ ಗಳ ಅವಾಂತರಕ್ಕೆ ಕಾರಣವಾಗಿರುವ ಟೈಮಿಂಗ್ ಪದ್ಧತಿಯನ್ನೇ ಕೈಬಿಡಬೇಕೆಂದು ಸಿಬಂದಿ ಒತ್ತಾಯಿಸಿದ್ದಾರೆ.
Passneger assults bus conductor over trival issue at Kannur in Mangalore, Protest held. A counter case has been registered at Kankandy Town Police Station.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm