ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm