ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm