ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 12:37 pm
HK News Staffer
ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಗ...
18-05-26 12:21 pm
Jones Asset Fraud, Bangalore: ಲೀಸ್ ಮನೆ ಹೆಸರಿನ...
18-05-26 11:36 am
ಬೇರೊಬ್ಬ ಮಹಿಳೆ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇ...
17-05-26 09:10 pm
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm