ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm