ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm