ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm