ಬ್ರೇಕಿಂಗ್ ನ್ಯೂಸ್
02-10-23 03:44 pm Mangalore Correspondent ಕರಾವಳಿ
ಉಳ್ಳಾಲ, ಅ.2: ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧವಿದ್ದರೂ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸಲಾಗಿದ್ದು ಕ್ವಾಟ್ರಿಗೆ 40 ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದರೂ ಪಾನಪ್ರಿಯರು ಹಿಡಿ ಶಾಪ ಹಾಕಿ ಮದ್ಯ ಖರೀದಿಸಿದ್ದಾರೆ.
ರಾಷ್ಟ್ರಪಿತ ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧ ನಡುವೆ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ನಿಷೇಧದ ಲಾಭ ಎತ್ತಿದ ವಿನಮ್ರ ಬಾರ್ ನವರು ಪ್ರತಿ ಮದ್ಯದ ಬ್ರಾಂಡಿಗೂ ಕ್ವಾಟ್ರಿಗೆ ನಲ್ವತ್ತರಂತೆ ಹೆಚ್ಚುವರಿ ಹಣವನ್ನ ಪೀಕಿಸಿ ಮದ್ಯ ಮಾರಾಟ ಮಾಡಿದ್ದಾರೆ. ಹೆಚ್ಚುವರಿ ಹಣ ದೋಚುತ್ತಿರುವುದರ ವಿರುದ್ಧ ಆಕ್ರೋಶಗೊಂಡ ಪಾನ ಪ್ರಿಯರೋರ್ವರು ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನ ವೀಡಿಯೋ ಮಾಡಿದ್ದಾರೆ.


ವಿನಮ್ರ ಬಾರ್ ನಲ್ಲಿ ಬೆಳ್ಳಂಬೆಳಗ್ಗೆಯೇ ಕುಡಿದು ತೂರಾಡುವುದು ಸಾಮಾನ್ಯ ಎನ್ನುವಂಥ ಸ್ಥಿತಿಯಿದೆ. ಬಾರ್ ಬೆಳಗ್ಗೆ 10 ಗಂಟೆ ನಂತರವೇ ತೆರೆಯಬೇಕೆಂದು ಅಬಕಾರಿ ಇಲಾಖೆ ನಿಯಮ ಇದ್ದರೂ ಈ ಬಾರಲ್ಲಿ ಮಾತ್ರ ಬೆಳಗ್ಗೆ 8 ಗಂಟೆಯಿಂದಲೇ ಮದ್ಯ ದೊರೆಯುತ್ತದೆ. ಅದಕ್ಕಾಗಿ ಹಗಲು ಕುಡುಕರಲ್ಲಿ ಬಾರ್ ನಲ್ಲಿ ಹೆಚ್ಚುವರಿ ದರವನ್ನು ಪೀಕಿಸುತ್ತಾರೆಂಬ ಆರೋಪ ಇದೆ. ಇಲ್ಲಿ ಬೆಳಗ್ಗೆಯೇ ಕುಡಿದು ಟೈಟಾಗುವ ಯುವಕರು ಬಾರ್ ಎದುರಲ್ಲೇ ಟೆಂಟ್ ಹಾಕಿ ಲೂಡೊ ಆಡುತ್ತಾರೆ. ನಿತ್ಯವೂ ಬೆಳ್ಳಂಬೆಳಗ್ಗೆ ಎಣ್ಣೆ ಕುಡಿಸುವ ಬಾರ್ ಮಹಾತ್ಮನ ಜನ್ಮ ದಿನಾಚರಣೆಯಂದು ಎಣ್ಣೆ ಪ್ರಿಯರಿಂದಲೇ ಡಬಲ್ ವಸೂಲಿ ಮಾಡಿ ಮದ್ಯ ನಿಷೇಧ ನಿಯಮವನ್ನೇ ಗಾಳಿಗೆ ತೂರಿದ್ದು ವಿಪರ್ಯಾಸ.
Mangalore Vinamra Bar opens at Thokottu amid Gandhi Jayanti lewing 40 Rs. More than the MRP price.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm