ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm