ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm