ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm