ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm