ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm