ಬ್ರೇಕಿಂಗ್ ನ್ಯೂಸ್
03-10-23 11:15 pm Mangaluru Correspondent ಕರಾವಳಿ
ಮಂಗಳೂರು, ಅ.3: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿಯಾಗಿದ್ದ 31ರ ಹರೆಯದ ವಿಜಾಪುರ ಮೂಲದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೋಮನ ಗೌಡ ಚೌದರಿ (31) ಮೃತ ಪೊಲೀಸ್ ಸಿಬಂದಿ.
ಮಂಗಳೂರಿನ ವಯರ್ ಲೆಸ್ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಯ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಕಳೆದ ಏಳು ವರ್ಷಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಇನ್ಸ್ಪೆಕ್ಟರ್ ಅವರಿಗೆ ಡೆಂಗ್ಯೂ ಜ್ವರ ಬಾಧಿಸಿದ್ದರಿಂದ ಮಂಗಳವಾರ ಬೆಳಗ್ಗೆ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸೋಮನಗೌಡ ಅವರೇ ಜೀಪಿನಲ್ಲಿ ಕರೆದುಕೊಂಡು ಹೋಗಿದ್ದರು.
ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಿ ನಡೆದು ಹೊರ ಬರುತ್ತಿದ್ದಾಗಲೇ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸೋಮನಗೌಡ ಯಾವುದೇ ರೀತಿಯ ಕುಡಿತ, ಸಿಗರೇಟ್ ಚಟ ಹೊಂದಿರಲಿಲ್ಲ. ಬೆಳಗ್ಗೆ ಒಂದೂವರೆ ಗಂಟೆ ವಾಕಿಂಗ್, ಸಂಜೆ ದಿನವೂ ಶಟ್ಲ್ ಆಡಿಕೊಂಡು ತುಂಬ ಆರೋಗ್ಯ ಕಾಳಜಿ ಹೊಂದಿದ್ದರು. ಅಂಥ ಯುವಕನಿಗೆ ಈ ರೀತಿ ಹಾರ್ಟ್ ಅಟ್ಯಾಕ್ ಆಗೋದನ್ನು ನಂಬಲಾಗುತ್ತಿಲ್ಲ ಎಂದು ಅವರ ಜೊತೆಗಿದ್ದ ಸಿಬಂದಿ ಹೇಳುತ್ತಾರೆ. ಅಲ್ಲದೆ, ಸೋಮನ ಗೌಡ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು ಪತ್ನಿಯೂ ಮಂಗಳೂರಿನಲ್ಲೇ ಇದ್ದರು. ಕಳೆದ ಕೋವಿಡ್ ಸಂದರ್ಭದಲ್ಲಿ ತನ್ನ ಎರಡು ತಿಂಗಳ ವೇತನವನ್ನೇ ಕೋವಿಡ್ ಸಂತ್ರಸ್ತರಿಗೆ ನೀಡಿ ಉದಾರತೆ ಮೆರೆದಿದ್ದರು. ತುಂಬ ಒಳ್ಳೆಯ ನಡತೆ ಹೊಂದಿದ್ದರು ಎನ್ನುತ್ತಾರೆ, ಅಲ್ಲಿನ ಸಿಬಂದಿ. ವೈದ್ಯರು ಹೃದಯಾಘಾತ ಎಂದಿದ್ದು ಪೋಸ್ಟ್ ಮಾರ್ಟಮ್ ಬಳಿಕ ನಿಜ ವಿಚಾರ ತಿಳಿಯಬೇಕಷ್ಟೆ.
A head Police constable who was working with Mangalore City Armed Reserve (CAR) police died of heart attack on Tuesday at falnir, October 3. The CAR head constable Somanna Gowda Chaudhary is the deceased person.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 12:37 pm
HK News Staffer
ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಗ...
18-05-26 12:21 pm
Jones Asset Fraud, Bangalore: ಲೀಸ್ ಮನೆ ಹೆಸರಿನ...
18-05-26 11:36 am
ಬೇರೊಬ್ಬ ಮಹಿಳೆ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇ...
17-05-26 09:10 pm
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm