ಬ್ರೇಕಿಂಗ್ ನ್ಯೂಸ್
10-11-20 08:39 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 10: ಬಿಜೆಪಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶರತ್ ಮಡಿವಾಳ ಹತ್ಯೆಯಲ್ಲಿ ಪಾಲ್ಗೊಂಡವರು ಎಂಬಂತೆ ಬಿಂಬಿಸಿ ಪ್ರಚೋದನಕಾರಿ ಭಾಷಣ ಮಾಡಿರುವ ಹರಿಕೃಷ್ಣ ಬಂಟ್ವಾಳ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ನೇತೃತ್ವದಲ್ಲಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಬಂದು ಬಂಟ್ವಾಳ ನಗರ ಠಾಣಾಧಿಕಾರಿಗೆ ದೂರು ನೀಡಿದ್ದಾರೆ. ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತಿಯಲ್ಲಿ ಹರಿಕೃಷ್ಣ ಬಂಟ್ವಾಳ್ ಭಾಷಣ ಮಾಡುವಾಗ, ರೈ ಅವರನ್ನು ಕೊಲೆಗಾರರಂತೆ ಬಿಂಬಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ವಾಟ್ಸಾಪ್ ಮತ್ತು ಫೇಸ್ ಬುಕ್ ನಲ್ಲಿ ಹರಿದಾಡುತ್ತಿದ್ದು, ಇದರಿಂದ ರೈ ಘನತೆಗೆ ಧಕ್ಕೆ ಉಂಟಾಗಿದೆ. ಅಲ್ಲದೆ, ಪ್ರಾಣಭಯ ಎದುರಾಗಿದೆ. ಈಗಾಗಲೇ ಶರತ್ ಹತ್ಯೆ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿಕೊಂಡಿದ್ದು, ಪ್ರಕರಣ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ತನಿಖೆಯಲ್ಲಿದೆ. ಇಂಥ ಸಂದರ್ಭದಲ್ಲಿ ಈ ರೀತಿ ಆಪಾದನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಕೆ ವೇಳೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಸಹಿತ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
The Bantwal and Pane Mangaluru Block Congress members and leaders have filed a complaint against Keonics Chairman Harikrishna Bantwal for deformation statement made against Former Minister Ramanath Rai.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm