ಬ್ರೇಕಿಂಗ್ ನ್ಯೂಸ್
04-10-23 02:45 pm Mangalore Correspondent ಕರಾವಳಿ
ಮಂಗಳೂರು, ಅ.4: ವಿಶ್ವ ಹಿಂದು ಪರಿಷತ್ ಸ್ಥಾಪನೆಗೊಂಡು 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಹಮ್ಮಿಕೊಂಡಿದ್ದು, ಅ.9ರಂದು ಮಂಗಳೂರಿಗೆ ಆಗಮಿಸಲಿದೆ. ಇದರ ಪ್ರಚಾರಾರ್ಥ ಮಂಗಳೂರಿನಲ್ಲಿ ಮತ್ತೊಂದು ಉಪ ರಥ ರಚಿಸಲಾಗಿದ್ದು ನಗರದ ಬಂಟ್ಸ್ ಹಾಸ್ಟೆಲಿನ ಕಾರ್ಯಾಲಯದಲ್ಲಿ ಚಾಲನೆ ನೀಡಲಾಗಿದೆ.
ಆರೆಸ್ಸೆಸ್ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್. ರಥಕ್ಕೆ ಚಾಲನೆ ನೀಡಿ, ವಿಶ್ವ ಹಿಂದು ಪರಿಷತ್ತಿನ 60ನೇ ವರ್ಷದ ಪ್ರಯುಕ್ತ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ದೇಶದ ಶೌರ್ಯದ ಇತಿಹಾಸವನ್ನು ಜನರಿಗೆ ತಿಳಿಸುವುದಕ್ಕಾಗಿಯೇ ಈ ಯಾತ್ರೆ ನಡೆಸಲಾಗುತ್ತಿದೆ. ನಮ್ಮ ದೇಶದಲ್ಲಿ ಸಾವಿರಾರು ವೀರರು ಜನ್ಮ ತಾಳಿದ್ದಾರೆ. ಅವರ ಇತಿಹಾಸವನ್ನು ನೆನಪಿಸಿಕೊಂಡು ಮತ್ತೆ ಹಿಂದುತ್ವದ ಪರಂಪರೆ ಶೌರ್ಯ ಬೆಳೆಸಿಕೊಳ್ಳುವಂತೆ ಮಾಡುವುದೇ ಇದರ ಉದ್ದೇಶ ಎಂದರು.

ವಿಹಿಂಪ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ಮಾತನಾಡಿ, ನಮ್ಮ ದೇಶವನ್ನು ಹಾವಾಡಿಗರ ದೇಶವೆಂದು ಪಾಶ್ಚಿಮಾತ್ಯರು ಹೇಳುತ್ತಿದ್ದರು. ಅದಲ್ಲದೆ, ನಮ್ಮ ದೇಶದ ಶೌರ್ಯದ ಇತಿಹಾಸವನ್ನೂ ಮರೆ ಮಾಚಿದ್ದಾರೆ. ಶಿವಾಜಿ, ರಾಣಾ ಪ್ರತಾಪ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ವೀರರಾಣಿ ಅಬ್ಬಕ್ಕ ಹೀಗೆ ನಮ್ಮ ನಾಡು ನುಡಿಗಾಗಿ ಸಾವಿರಾರು ಮಂದಿ ಶೌರ್ಯದ ಇತಿಹಾಸ ದಾಖಲಿಸಿದ್ದಾರೆ. ಇಂಥ ವೀರ ಪರಂಪರೆ, ಇತಿಹಾಸ ನಮ್ಮ ದೇಶದ ಮೂಲೆ ಮೂಲೆಗಳಲ್ಲೂ ಸಿಗುತ್ತವೆ. ಇವನ್ನು ನಮ್ಮ ಇಂದಿನ ಯುವ ಜನಾಂಗ ಮರೆಯಬಾರದು. ನಮ್ಮ ಶಿಕ್ಷಣದಲ್ಲಿ ಇಂಥ ಇತಿಹಾಸಗಳು ಕಲಿಯುವುದಕ್ಕೆ ಸಿಗಲ್ಲ. ಅವನ್ನು ತಿಳಿಸುವುದಕ್ಕಾಗಿಯೇ ರಾಷ್ಟ್ರೀಯತೆ ಜಾಗೃತಿಗೊಳಿಸುವ ಉದ್ದೇಶದೊಂದಿಗೆ ಶೌರ್ಯ ಜಾಗರಣ ರಥಯಾತ್ರೆ ನಡೆಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉದ್ಯಮಿ ಗಿರಿಧರ್ ಶೆಟ್ಟಿ ಸೇರಿದಂತೆ ಬಜರಂಗದಳ ಮುಖಂಡರು ಉಪಸ್ಥಿತರಿದ್ದರು. ಉಪ ರಥವು ಮಂಗಳೂರು, ಮೂಲ್ಕಿ, ಮೂಡುಬಿದ್ರೆಯಲ್ಲಿ ಸಂಚರಿಸಲಿದ್ದು, ಅ.9ರಂದು ಕದ್ರಿ ಮೈದಾನ ಸೇರಲಿದೆ. ಅಂದು ಬೃಹತ್ ಸಮಾವೇಶ ನಡೆಯಲಿದ್ದು, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
The Vishwa Hindu Parishad (VHP) will mark the 60th anniversary of its founding in the state. To promote this, another sub-ratha has been formed in Mangaluru and launched at the office of Bunts Hostel in the city.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am