ಬ್ರೇಕಿಂಗ್ ನ್ಯೂಸ್
04-10-23 10:52 pm Mangalore Correspondent ಕರಾವಳಿ
ಮಂಗಳೂರು, ಅ.4: ಹೆಬ್ಬಾವು ಮಲಬದ್ಧತೆ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿತ್ತು ಎಂದರೆ ನಂಬುತ್ತೀರಾ.. ಆದರೆ ನಂಬಲೇ ಬೇಕು. ಯಾಕಂದ್ರೆ, ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿ ಬಿದ್ದುಕೊಂಡಿದ್ದ ಹೆಬ್ಬಾವಿಗೆ ಮಂಗಳೂರಿನ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ರಕ್ಷಣೆ ಮಾಡಿದೆ.
ನಗರದ ಕದ್ರಿಯಲ್ಲಿ ಹೆಬ್ಬಾವೊಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಉರಗ ರಕ್ಷಕ ಧೀರಜ್ ಗಾಣಿಗ ಗಮನಕ್ಕೆ ಬಂದಿತ್ತು. ಏನೋ ಸಮಸ್ಯೆ ಆಗಿರಬೇಕೆಂದು ವೈದ್ಯರಿಗೆ ತಿಳಿಸಿದ್ದರು. ಅದರಂತೆ, ವೈದ್ಯರು ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ಪೂರ್ತಿ ಮಲ ತುಂಬಿಕೊಂಡಿರುವುದು ಕಂಡುಬಂದಿತ್ತು.


ಮಂಗಳೂರಿನ ಪ್ರಾಣಿ ವೈದ್ಯರಾದ ಡಾ.ಮೇಘನಾ ಪೆಮ್ಮಯ್ಯ, ಡಾ. ಯಶಸ್ವಿ ನಾರಾವಿ, ಡಾ. ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಅವರ ವೈದ್ಯರ ತಂಡ ಹೆಬ್ಬಾವಿನ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದೆ.
ತಪಾಸಣೆ ವೇಳೆ ಹೆಬ್ಬಾವು ಮಲಬದ್ಧತೆಯಿಂದ ಬಳಲುತ್ತಿರುವುದು ಕಂಡುಬಂತು. ಗಟ್ಟಿಯಾದ ರೀತಿಯಲ್ಲಿ ಮಲ ಹೊಟ್ಟೆಯಲ್ಲಿ ಕಟ್ಟಿಕೊಂಡಿತ್ತು. ದೇಹದ ಅರ್ಧ ಭಾಗದಷ್ಟು ಮಲವೇ ತುಂಬಿಕೊಂಡಿತ್ತು. 13 ಕೆಜಿ ತೂಕದ ಹೆಬ್ಬಾವಿನಲ್ಲಿ ಬಹುತೇಕ ಮಲ ಇತ್ತು. ಮೊದಲು ಅರಿವಳಿಕೆ ಇಂಜೆಕ್ಷನ್ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆಯಲ್ಲಿ ತ್ಯಾಜ್ಯವನ್ನು ಪೂರ್ತಿ ತೆಗೆದುಹಾಕಲಾಗಿದೆ ಎಂದು ಡಾ. ಯಶಸ್ವಿ ನಾರಾವಿ ತಿಳಿಸಿದ್ದಾರೆ. ಹೆಬ್ಬಾವು ಚೇತರಿಸಿಕೊಂಡ ಬಳಿಕ ಅದನ್ನು ರಕ್ಷಿಸಿದ ಸ್ಥಳದಲ್ಲೇ ಬಿಡಲಾಯಿತು.
Digestive disorder in snake cobra, three hours operation gives back like to snake in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm