ಬ್ರೇಕಿಂಗ್ ನ್ಯೂಸ್
05-10-23 08:56 pm Mangalore Correspondent ಕರಾವಳಿ
ಮಂಗಳೂರು, ಅ.5: "ಮಂಗಳೂರು ದಸರಾ" ಎಂದೇ ಹೆಸರಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ 34ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಬಾರಿಯೂ ವಿಶ್ವವಿಖ್ಯಾತ “ಮಂಗಳೂರು ದಸರಾ" ಇದೇ ತಿಂಗಳ ಅ.15ರಂದು ಗಣೇಶ, ನವದುರ್ಗೆಯರು ಮತ್ತು ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೊಳಿಸಿ ವಿಧ್ಯುಕ್ತ ಆರಂಭಗೊಳ್ಳಲಿದೆ ಎಂದು ದೇಗುಲ ಸಮಿತಿಯ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ದಸರಾ ಮಹೋತ್ಸವ ಅ.15 ರಿಂದ ಮೊದಲ್ಗೊಂಡು 25ರ ವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ, ಅ.24ರಂದು 4 ಗಂಟೆಗೆ ಸರಿಯಾಗಿ “ಮಂಗಳೂರು ದಸರಾ” ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜರಸ್ತೆಯಲ್ಲಿ ಸಾಗಲಿದೆ. ಸುಮಾರು ಏಳು ಕಿಮೀ ಉದ್ದಕ್ಕೆ ಅದ್ದೂರಿ ಮೆರವಣಿಗೆ ನಡೆದು ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಮರುದಿನ ಬೆಳಗ್ಗೆ ಮೂರ್ತಿಗಳ ವಿಸರ್ಜನೆ ನಡೆಯಲಿದೆ ಎಂದರು.
ಅ.15ರಿಂದ ಅಕ್ಟೋಬ್ 23ರ ವರೆಗೆ ದಿನಂಪ್ರತಿ ಸಂಜೆ 6 ರಿಂದ ರಾತ್ರಿ 9 ಗಂಟೆಯ ವರೆಗೆ ಪ್ರಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವಾರು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಟ್ಯಾಬ್ಲೋ ಗಳು ಭಾಗವಹಿಸಲಿದ್ದು ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ. ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲಕರು ತಮ್ಮ ತಮ್ಮ ಕಟ್ಟಡಗಳನ್ನು ವಿದ್ದುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಟ್ರಸ್ಟಿ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಈ ಬಾರಿಯೂ ಮೆರವಣಿಗೆ ಸಾಗುವ ನಗರ ಪ್ರದೇಶದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ವಿದ್ಯುತ್ ದೀಪಗಳಿಂದ ಶೃಂಗರಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Mangalore Kudroli Dasara to be held from October 15th to to 24th. Grand procession will be held at sharp 4 in the evening said Padmaraj.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am