ಬ್ರೇಕಿಂಗ್ ನ್ಯೂಸ್
06-10-23 03:46 pm Mangalore Correspondent ಕರಾವಳಿ
ಮಂಗಳೂರು, ಅ.6: ಮೂಡುಬಿದ್ರೆ ತಾಲೂಕಿನ ಪುಚ್ಚಮೊಗರಿನಲ್ಲಿ ಹಿಂದುಗಳಿಗೆ ಸೇರಿದ ಕಟ್ಟೆಯಲ್ಲಿ ಈದ್ ಮಿಲಾದ್ ಹೆಸರಲ್ಲಿ ಹಸಿರು ಬಾವುಟ ಕಟ್ಟಿದ್ದು ವಿವಾದಕ್ಕೆ ಕಾರಣವಾಗಿತ್ತು. ಸ್ಥಳೀಯರ ದೂರಿನಂತೆ ಸ್ಥಳಕ್ಕೆ ಬಂದ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ, ಹೊಸಬೆಟ್ಟು ಗ್ರಾಮ ಪಂಚಾಯತ್ ಪಿಡಿಓ ಅಧಿಕಾರಿಯನ್ನೇ ತರಾಟೆಗೆತ್ತಿಕೊಂಡಿದ್ದು, ಇದರ ವಿಡಿಯೋ ವೈರಲ್ ಆಗಿದೆ.
ಸೆ.30ರಂದು ಈದ್ ಮಿಲಾದ್ ಹೆಸರಲ್ಲಿ ಸ್ಥಳೀಯ ಮುಸ್ಲಿಮರು ಮೆರವಣಿಗೆ ನಡೆಸಿದ್ದರು. ಈ ಸಂದರ್ಭದಲ್ಲಿ ಗಣಪತಿ ಕಟ್ಟೆ ಎಂದು ಕರೆಯಲಾಗುವ ಮರದ ಕಟ್ಟೆಯಲ್ಲಿ ಟೈಯರ್ ಗೆ ಹಸಿರು ಬಣ್ಣ ಬಳಿದು ಹಸಿರು ಬಾವುಟವನ್ನು ನೆಟ್ಟಿದ್ದರು. ಆದರೆ ಈ ವಿಚಾರದಲ್ಲಿ ಸ್ಥಳೀಯವಾಗಿ ಆಕ್ಷೇಪ ಬಂದಿರಲಿಲ್ಲ. ಸಂಜೆ ವೇಳೆಗೆ ತೆಗೆಯಬಹುದು ಎಂದು ಪರಿಸರದ ನಿವಾಸಿಗಳು ಅಂದುಕೊಂಡಿದ್ದರು. ಬಾವುಟ ತೆರವು ಮಾಡದ ಹಿನ್ನೆಲೆಯಲ್ಲಿ ಸ್ಥಳೀಯ ಹೊಸಬೆಟ್ಟು ಪಂಚಾಯತ್ ಪಿಡಿಓ ಶೇಖರ್ ಅವರಲ್ಲಿ ದೂರು ನೀಡಿದ್ದರು.



ಪಂಚಾಯತ್ ಪಿಡಿಓ ನಿರ್ಲಕ್ಷ್ಯ ವಹಿಸಿದ್ದು, ಬಾವುಟ ತೆರವು ಮಾಡಲು ಮುಂದಾಗಿರಲಿಲ್ಲ. ಹೀಗಾಗಿ ಸ್ಥಳೀಯರು ಮೂಡುಬಿದ್ರೆ ಪೊಲೀಸರ ಗಮನಕ್ಕೆ ತಂದಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ, ಪಿಡಿಓ ಅಧಿಕಾರಿಯನ್ನು ಸ್ಥಳಕ್ಕೆ ಕರೆದು ತರಾಟೆಗೆತ್ತಿಕೊಂಡಿದ್ದಾರೆ. ಇದಕ್ಕೆ ಪರ್ಮಿಶನ್ ತೆಗೆದುಕೊಂಡಿದ್ದಾರೆಯೇ,.. ಪರ್ಮಿಶನ್ ಇಲ್ಲದೆ ಬಾವುಟ ಹಾಕಲು ಅವಕಾಶ ನೀಡಿದ್ದು ಯಾಕೆ.. ನಿನಗೆ ನಿನ್ನ ಕೆಲಸ ಗೊತ್ತಿಲ್ಲ. ಅಧಿಕಾರ ವ್ಯಾಪ್ತಿ ತಿಳಿದಿಲ್ಲ. ಅದು ತಿಳಿಯದೆ ಯಾಕೆ ಪಿಡಿಓ ಆಗಿದ್ದೀಯಾ ಎಂದು ಜೋರು ಮಾಡಿದ್ದಾರೆ. ಅಧಿಕಾರಿಯನ್ನು ಸಾರ್ವಜನಿಕರ ನಡುವಲ್ಲೇ ತೀವ್ರ ತರಾಟೆಗೆತ್ತಿಕೊಂಡ ಪೊಲೀಸ್ ಇನ್ಸ್ ಪೆಕ್ಟರ್ ಮಾತುಗಳು ವಿಡಿಯೋದಲ್ಲಿ ರೆಕಾರ್ಡ್ ಆಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.
ಪೊಲೀಸ್ ಅಧಿಕಾರಿಯ ನಡೆ ಬಗ್ಗೆ ಮೆಚ್ಚುಗೆಯೂ ವ್ಯಕ್ತವಾಗಿದೆ. ಸರಕಾರಿ ಅಧಿಕಾರಿಯಾಗಿದ್ದು ನಿರ್ಲಕ್ಷ್ಯ ವಹಿಸಿದ್ದರಿಂದಲೇ ಈ ರೀತಿ ಆಗಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.
#Mangalore #Muslim Green flag on #Ganapati Katta at #Moodbidre, #Police inspector #sandesh shouting at #PDO video goes viral #breakingnews pic.twitter.com/mnebQj0m9j
— Headline Karnataka (@hknewsonline) October 6, 2023
Mangalore Muslim Green flag on Ganapati Katta at Moodbidre, inspector sandesh shouting at PDO video goes viral.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm