ಬ್ರೇಕಿಂಗ್ ನ್ಯೂಸ್
07-10-23 06:29 pm HK News Desk ಕರಾವಳಿ
ಕಾರವಾರ, ಅ.7: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪಿತೃಕಾರ್ಯ ನೆರವೇರಿಸಲಾಗುತ್ತದೆ. ಆದರೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ. ಧಾರವಾಡ ಧಾನೇಶ್ವರಿ ನಗರದ ಶಂಸಾದ್ ಎಂಬುವರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಇಲ್ಲಿನ ಪಿತೃಶಾಲೆಯಲ್ಲಿ ಪೂರೈಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಸಾದ್, ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಬಳಿ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳ್ಗೆ ಸಿಗಲಿ ಎಂಬ ಉದ್ದೇಶದಿಂದ ಈ ಪಿತೃ ಕಾರ್ಯ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.
ಜ್ಯೋತಿಷಿಗಳ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್ ಹಾಗೂ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು, ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬವೊಂದು ಪಿತೃಕಾರ್ಯ ನೆರವೇರಿಸಿದ್ದು, ಇದೇ ಮೊದಲು ಎಂದು ಹೇಳಲಾಗಿದೆ.
Muslim family in Gokarna perform Pitrakarya at temple, first time ever.Pitrakarya is usually performed in Hinduism. But a Muslim family has recently performed the patrimony in Gokarna during the festival of the patriarch. Shamsad of Dhaneshwari Nagar, Dharwad, performed Narayana Bali, Tripindi Shraddha and Thilahavana at the Pitrushala here on the advice of an astrologer.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm