ಬ್ರೇಕಿಂಗ್ ನ್ಯೂಸ್
10-10-23 05:11 pm Udupi Correspondent ಕರಾವಳಿ
ಉಡುಪಿ, ಅ.10: ವಿಎಚ್ ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯದ ಮೂಲಕ ಜಾಮೀನು ಪಡೆದುಕೊಂಡಿರುವ ಶರಣ್ ಪಂಪ್ವೆಲ್ ಗೆ ಯಾವುದೇ ಪೂರ್ವಾನುಮತಿ ಇಲ್ಲದೆ ದಕ್ಷಿಣ ಕನ್ನಡ ಜಿಲ್ಲೆ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿತ್ತು, ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ.
ಉಡುಪಿಯ ಸಮಾಜೋತ್ಸವದಲ್ಲಿ ಭಾಗವಹಿಸಿದರೆ ಅವರನ್ನು ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಬಂಧಿಸುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಅವರು ಉಡುಪಿ ಪೊಲೀಸರ ಆದೇಶದ ಬಗ್ಗೆ ತಿಳಿದು ಹೆಜಮಾಡಿಯಿಂದ ವಾಪಸ್ಸಾಗಿರುವ ಮಾಹಿತಿ ಲಭಿಸಿದೆ.
ಈ ಬಗ್ಗೆ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ನ್ಯಾಯಾಲಯ ನೀಡಿರುವ ಜಾಮೀನಿನಲ್ಲಿನ ಷರತ್ತಿನ ಅನ್ವಯ ಶರಣ್ ಪಂಪ್ವೆಲ್ ಅನುಮತಿ ಇಲ್ಲಿದೆ ದ.ಕ. ಜಿಲ್ಲೆ ಬಿಟ್ಟು ಹೋಗುವಂತಿಲ್ಲ. ಒಂದು ವೇಳೆ ಅದನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಗೆ ಆಗಮಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
Bajrang Dal Shaurya Yatre in Udupi, Sharan Pumpwell stopped by Police over court order. Udupi police did not allow him to take part in the event.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm