ಬ್ರೇಕಿಂಗ್ ನ್ಯೂಸ್
10-10-23 08:13 pm Mangalore Correspondent ಕರಾವಳಿ
ಉಳ್ಳಾಲ, ಅ.10: ಕೆಎಸ್ ಆರ್ ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಇಂದು ಸಂಜೆ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ತಾಮಾರ್ ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.
ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ , ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar junction accident between KSRTC bus and two wheeler, one injured.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm