ಬ್ರೇಕಿಂಗ್ ನ್ಯೂಸ್
10-10-23 08:13 pm Mangalore Correspondent ಕರಾವಳಿ
ಉಳ್ಳಾಲ, ಅ.10: ಕೆಎಸ್ ಆರ್ ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಇಂದು ಸಂಜೆ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ತಾಮಾರ್ ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.

ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ , ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar junction accident between KSRTC bus and two wheeler, one injured.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm