ಬ್ರೇಕಿಂಗ್ ನ್ಯೂಸ್
10-10-23 08:22 pm Mangalore Correspondent ಕರಾವಳಿ
ಉಳ್ಳಾಲ, ಅ.10: ಈದ್ ಮಿಲಾದ್ ವಾಹನ ಜಾಥಾ ನೆಪದಲ್ಲಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಅಬ್ಬರಿಸಿ ಸಾರ್ವಜನಿಕರಿಗೆ ಕಿರಿ, ಕಿರಿ ನೀಡಿದ್ದ 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ದಂಡ ಪ್ರಯೋಗಿಸಿದ್ದಲ್ಲದೆ ಪೋಷಕರ ಮುಂದೆಯೇ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಳೆದ ಸೆ.28 ರಂದು ಪ್ರವಾದಿ ಮಹಮ್ಮದರ ಜನ್ಮದಿನದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾದಲ್ಲಿ ನಡೆದಿದ್ದ ಈದ್ ಮಿಲಾದ್ ಹಬ್ಬಕ್ಕೆ ಯುವಕರ ಗುಂಪೊಂದು ಕುತ್ತಾರು, ಮಾಡೂರು ಕಡೆಯಿಂದ ವಾಹನ ಜಾಥಾ ನಡೆಸಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಕಿರಿ,ಕಿರಿ ಉಂಟು ಮಾಡಿದಲ್ಲದೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ಏರಿ ವಿಕೃತವಾಗಿ ವರ್ತಿಸಿ ಘೋಷಣೆಗಳನ್ನ ಕೂಗಿದ್ದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಯುವಕರ ವರ್ತನೆಗೆ ಮುಸ್ಲಿಂ ಧರ್ಮೀಯರೇ ಆಕ್ಷೇಪ ವ್ಯಕ್ತಪಡಿಸಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.

ಮಾಡೂರಿನ ಇಬ್ರಾಹಿಂ, ಅಂಬ್ಲಮೊಗರುವಿನ ಮಹಮ್ಮದ್ ಅರ್ಷಾದ್ ಬಶೀರ್, ಪಡು ಮಾರ್ನಾಡುವಿನ ಅಶೀಶ್ ಪಿಂಟೊ, ಮಂಜನಾಡಿ ಗ್ರಾಮದ ಕೆ.ಎ.ಇಕ್ಬಾಲ್ ಅಬ್ದುಲ್ ರಹಿಮಾನ್, ಇಮ್ರಾನ್, ಇಬ್ರಾಹಿಂ ಬಾತಿಷ್ ಇಸ್ಮಾಯಿಲ್, ಉಮರ್ ಫಾರೂಕ್, ಅಬ್ದುಲ್ ಖಾದರ್, ಕೆ.ಎ.ಇಕ್ಬಾಲ್, ಬಜಾಲಿನ ಮಹಮ್ಮದ್ ಹುಸೇನ್, ಕೋಟೆಕಾರಿನ ಶೌಕತ್ ಆಲಿ, ಬೆಳ್ತಂಗಡಿಯ ಮಹಮ್ಮದ್ ನಿಝಾರ್, ಮಾಡೂರಿನ ಶೇಖ್ ಖಲೀಲ್ ಅಹ್ಮದ್, ಪಾವೂರಿನ ಇಬ್ರಾಹಿಂ, ಸಜೀಪ ನಡುವಿನ ಮಹಮ್ಮದ್ ಇರ್ಷಾದ್ ಸೇರಿದಂತೆ ಒಟ್ಟು 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆಯಡಿ ದಂಡ ವಸೂಲು ಮಾಡಿದ್ದಾರೆ.
ಪೋಷಕರ ಸಮ್ಮುಖದಲ್ಲೇ ಉಳ್ಳಾಲ ಪೊಲೀಸ್ ಠಾಣಾ ನೂತನ ಪಿಐ ಬಾಲಕೃಷ್ಣ ಅವರು ಯುವಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಶಾರದಾ ಉತ್ಸವಕ್ಕೂ ಡಿ.ಜೆ ಅಳವಡಿಸದಂತೆ ಇಲಾಖೆಯ ಆದೇಶ ಬಂದಿದ್ದು ಉಳ್ಳಾಲಕ್ಕೂ ಇದು ಅನ್ವಯಿಸಲಿದೆ ಎಂದು ಪಿಐ ಬಾಲಕೃಷ್ಣ ತಿಳಿಸಿದ್ದಾರೆ.
Mangalore Ullal eid disturbance by youths on abakka circle, Inapector warns all youths found in video.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm