ಬ್ರೇಕಿಂಗ್ ನ್ಯೂಸ್
11-11-20 05:12 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 11 : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಜನರು ತಮ್ಮ ಮೂಲ ಸೌಕರ್ಯಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ನೀಡಿ ಬೇಸತ್ತು ಈಗ ಪ್ರಧಾನಿಯ ಮೊರೆ ಹೋಗಿದ್ದಾರೆ. ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು- ಕಮಿಲ- ಬಳ್ಪ ರಸ್ತೆ ಸಮಸ್ಯೆಯ ವೀಡಿಯೊ ಸಹಿತ ವಿವರಣೆಯುಳ್ಳ ಸಿ.ಡಿ. ತಯಾರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ರವಾನಿಸಿದ್ದಾರೆ. ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಸಿಡಿ ಮತ್ತು ಮನವಿಯನ್ನು ಕಳುಹಿಸಿದ್ದಾರೆ.
ಇಂದು ಅತ್ಯಾಧುನಿಕ ತಂತ್ರಜ್ಞಾನದ ಮಾಧ್ಯಮಗಳಿದ್ದರೂ, ಅಂಚೆ ಕಚೇರಿ ಮೂಲಕವೇ ಸಮಸ್ಯೆ ಹೊತ್ತ ವೀಡಿಯೊ ಸಿ.ಡಿ.ಯನ್ನು ಪ್ರಧಾನಿಗೆ ಕಳುಹಿಸಿದ್ದು ವಿಶೇಷ. ಗ್ರಾಮೀಣ ಭಾಗದಲ್ಲಿ ಬಹುಪಾಲು ಮಂದಿ ಅಂಚೆ ಕಚೇರಿ ಬಳಸುತ್ತಿದ್ದಾರೆ. ಗ್ರಾಮಾಂತರದ ಬ್ಯಾಂಕಿಂಗ್ ವ್ಯವಸ್ಥೆ ಕೂಡ ಅಂಚೆ ಕಚೇರಿಯೇ ಆಗಿದೆ. ಹೀಗಾಗಿ ಆಧುನಿಕ ವ್ಯವಸ್ಥೆ ಇದ್ದರೂ ಗ್ರಾಮೀಣ ಭಾಗದ ಅಂಚೆ ಕಚೇರಿ ಬಳಕೆಯಾಗುವಂತೆ ಮಾಡಲು ಸಿ.ಡಿ. ರವಾನೆಯನ್ನು ನಾಗರಿಕ ಹೋರಾಟ ಕ್ರಿಯಾ ಸಮಿತಿ ಅಂಚೆ ಮೂಲಕ ಮಾಡಿದೆ.
ವೀಡಿಯೊ ಸಿ.ಡಿ. ರವಾನೆ ಸಂದರ್ಭ ನಾಗರಿಕ ಹೋರಾಟ ಕ್ರಿಯಾ ಸಮಿತಿ ಪದಾಧಿಕಾರಿಗಳಾದ ಪಿ.ಎಸ್. ಗಂಗಾಧರ ಭಟ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಜೀವನ್ ಮಲ್ಕಜೆ, ಲಕ್ಷ್ಮೀಶ ಗಬ್ಲಡ್ಕ, ಮಹೇಶ್ ಪುಚ್ಚಪ್ಪಾಡಿ, ಹರ್ಷಿತ್ ಕಾಂತಿಲ, ಬಾಬು ಕಮಿಲ, ಸುರೇಶ್ ಮೊಗ್ರ , ವಿಶ್ವನಾಥ ಕೇಂಬ್ರೋಳಿ ಮತ್ತಿತರರು ಇದ್ದರು.
Villagers of Kamila-Mogra in Guthigaru gram panchayat of Sullia taluk in Dakshina Kannada have sent a CD that contains a documentary that narrates the pathetic condition of their village, which lacks basic infrastructure, to Prime Minister Narendra Modi.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm